ADVERTISEMENT

‘ವರ್ಗಾವಣೆ ಪತ್ರಕ್ಕೆ ಸಹಿ ಹಾಕಲು ಸಿದ್ದರಾಮಯ್ಯಗೆ ಪುರುಸೊತ್ತಿದೆ’

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2017, 19:30 IST
Last Updated 14 ಡಿಸೆಂಬರ್ 2017, 19:30 IST
‘ವರ್ಗಾವಣೆ ಪತ್ರಕ್ಕೆ ಸಹಿ ಹಾಕಲು ಸಿದ್ದರಾಮಯ್ಯಗೆ ಪುರುಸೊತ್ತಿದೆ’
‘ವರ್ಗಾವಣೆ ಪತ್ರಕ್ಕೆ ಸಹಿ ಹಾಕಲು ಸಿದ್ದರಾಮಯ್ಯಗೆ ಪುರುಸೊತ್ತಿದೆ’   

ಬೆಂಗಳೂರು: ‘ರಾಜ್ಯ ಎಷ್ಟೊಂದು ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೂ ಮುಖ್ಯಮಂತ್ರಿಗಳಿಗೆ ಮಾತ್ರ ವರ್ಗಾವಣೆಯ ಶಿಫಾರಸು ಪತ್ರಗಳಿಗೆ ಸಹಿ ಹಾಕಲು ಪುರುಸೊತ್ತಿದೆ’ ಎಂದು ಹೈಕೋರ್ಟ್‌ ಕಟಕಿಯಾಡಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸಿತು.

ಈ ವೇಳೆ ಎಚ್‌.ಜಿ.ರಮೇಶ್ ಅವರ ಪ್ರಶ್ನೆಗೆ ಸರ್ಕಾರಿ ವಕೀಲರು, ‘ಸ್ವಾಮಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ವರ್ಗಾವಣೆ ಮಾಡಲಾಗಿದೆ’ ಎಂದರು.

ADVERTISEMENT

ಇದಕ್ಕೆ ಅಸಮಾಧಾನ ಹೊರಹಾಕಿದ ರಮೇಶ್, ‘ಏನ್ರೀ, ಆಡಳಿತಾತ್ಮಕ ಪ್ರಕ್ರಿಯೆಗೆ ಅನುಕೂಲವಾಗುವಂತೆ ವರ್ಗಾವಣೆಗೆ ಶಿಫಾರಸು ಮಾಡಿದರೆ ಸರಿ. ಆದರೆ, ಪ್ರತಿನಿತ್ಯ ಸಾಕಷ್ಟು ವರ್ಗಾವಣೆ ಪತ್ರಗಳಿಗೆ ಆದೇಶಿಸುತ್ತಾ ರಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.