ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಬೈರವಾಡಗಿ ಗ್ರಾಮದಲ್ಲಿ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ.
ಬುಧವಾರ ನಸುಕಿನಲ್ಲಿ ಗೋಡೆ ಕುಸಿದ ಪರಿಣಾಮ ಮನೆಯೊಳಗೆ ನಿದ್ರಿಸುತ್ತಿದ್ದವರ ಪೈಕಿ ಶಂಕ್ರೆಮ್ಮ ರಾಮಚಂದ್ರ ಅವರಾದಿ, ಮಹಾದೇವಿ ರಾಮಚಂದ್ರ ಅವರಾದಿ ಸಾವಿಗೀಡಾಗಿದ್ದಾರೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ತಹಶೀಲ್ದಾರ್ ಎಂ.ಎನ್.ಚೋರಗಸ್ತಿ ಭೇಟಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.