ADVERTISEMENT

ವಿಜಯಪುರ ಡಿಡಿಪಿಐ ಅಮಾನತು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 19:30 IST
Last Updated 27 ಮಾರ್ಚ್ 2018, 19:30 IST

ವಿಜಯಪುರ: ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪ್ರಹ್ಲಾದ ಟಿ.ಬೊಂಗಾಳೆ ಅವರನ್ನು ಮಂಗಳವಾರ ಅಮಾನತು ಮಾಡಲಾಗಿದೆ.

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ವಿವೇಕಾನಂದ ಪ್ರೌಢಶಾಲೆಯಲ್ಲಿ ಮಾರ್ಚ್‌ 23ರಂದು ನಡೆದ ಎಸ್ಸೆಸ್ಸೆಲ್ಸಿ ಕನ್ನಡ ಭಾಷಾ ವಿಷಯದ ಪ್ರಶ್ನೆಪತ್ರಿಕೆ ಬಹಿರಂಗಗೊಂಡಿತ್ತು. ಮಾರ್ಚ್‌ 26ರಂದು ನಡೆದ ಗಣಿತ ಪರೀಕ್ಷೆಯ ಪ್ರಶ್ನೆಪತ್ರಿಕೆಯೂ ವಿಜಯಪುರ ನಗರದಲ್ಲಿ ಬಹಿರಂಗಗೊಂಡಿದ್ದಾಗಿ ದೂರು ಕೇಳಿ ಬಂದಿದ್ದವು.

ಈ ಎರಡೂ ದೂರುಗಳ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಆರೋಪದಡಿ, ವಿಜಯಪುರ ಡಿಡಿಪಿಐ ಪ್ರಹ್ಲಾದ ಟಿ.ಬೊಂಗಾಳೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.