ಬೆಂಗಳೂರು: ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಿದ್ದ ಸಿ.ಎಂ.ಲಿಂಗಪ್ಪ ಅವರ ಹೆಸರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಒಪ್ಪಿಗೆ ಸೂಚಿಸಿಲ್ಲ ಎಂದು ರಾಜಭವನದ ಮೂಲಗಳು ತಿಳಿಸಿವೆ.
ಇತ್ತೀಚೆಗೆ ರಾಜ್ಯ ಸರ್ಕಾರ ವಿಧಾನ ಪರಿಷತ್ತಿಗೆ ಮೂವರನ್ನು ನಾಮನಿರ್ದೇಶನ ಮಾಡಿ ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಿತ್ತು.
ರಾಜ್ಯಪಾಲರು ಮೋಹನ್ ಕೊಂಡಜ್ಜಿ ಮತ್ತು ಪಿ.ಆರ್. ರಮೇಶ್ ಅವರ ನಾಮನಿರ್ದೇಶನಕ್ಕೆ ಒಪ್ಪಿಗೆ ಸೂಚಿಸಿದ್ದು ಸಿ.ಎಂ.ಲಿಂಗಪ್ಪ ಅವರ ಹೆಸರಿಗೆ ಒಪ್ಪಿಗೆ ನೀಡಿಲ್ಲ.
ಶಿಕ್ಷಣ ಮತ್ತು ಸಮಾಜ ಸೇವೆ ಕೋಟಾದಲ್ಲಿ ಅವರು ಬರುವುದಿಲ್ಲ ಎಂದು ರಾಜ್ಯಪಾಲರು ಅವರ ಹೆಸರಿಗೆ ಒಪ್ಪಿಗೆ ನೀಡಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.