ಬೆಂಗಳೂರು: ವಿಧಾನಪರಿಷತ್ನ ಕಾಂಗ್ರೆಸ್ ಸಹ ಸದಸ್ಯ ಬೈರತಿ ಸುರೇಶ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರನ್ನು ಭೇಟಿಯಾದ ಸುರೇಶ ರಾಜೀನಾಮೆ ಸಲ್ಲಿಸಿದರು. ರಾಜೀನಾಮೆಯನ್ನು ಸಭಾಪತಿ ಅಂಗೀಕರಿಸಿದ್ದಾರೆ.
ಹೆಬ್ಬಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಸುರೇಶ ಅವರು ತಯಾರಿ ನಡೆಸಿದ್ದಾರೆ.
ಪರಿಷತ್ತಿನಲ್ಲಿ ಅವರ ಸದಸ್ಯತ್ವ ಅವಧಿ ಇನ್ನು ಮೂರು ತಿಂಗಳಷ್ಟೇ ಬಾಕಿ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.