ADVERTISEMENT

ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರ ಪುನಃ ನೇಮಕ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2014, 19:30 IST
Last Updated 13 ಆಗಸ್ಟ್ 2014, 19:30 IST

ಬೆಂಗಳೂರು: ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಡಾ.ಎಂ.ಎಸ್‌. ಮೂರ್ತಿ ಅವರನ್ನು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾ­ಡೆಮಿಗೆ ಬಿ.ಎ. ಮಹಮ್ಮದ್‌ ಹನೀಫ್‌ ಅವರನ್ನು ಅಧ್ಯಕ್ಷರನ್ನಾಗಿ ಪುನಃ ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಇವರ ನೇಮಕ ರದ್ದು ಮಾಡಿ ಜೂನ್‌ನಲ್ಲಿ ಇಲಾಖೆ ಆದೇಶಿಸಿತ್ತು. ಈ ಅಕಾಡೆಮಿಗಳ ಅಧ್ಯಕ್ಷರ ನೇಮಕ ವಿವಾದ ನ್ಯಾಯಾಲಯದಲ್ಲಿ ಇರುವ ಕಾರಣ, ನೇಮಕಾತಿಯನ್ನು ತಾತ್ಕಾಲಿ­ಕವಾಗಿ ರದ್ದು ಮಾಡಲಾಗಿದೆ ಎಂದು ಅಧಿಕಾರಿಗಳು ಆಗ ತಿಳಿಸಿದ್ದರು. ಈ ಎರಡು ಅಕಾಡೆಮಿಗಳಿಗೆ ಜೂನ್‌ಗಿಂತ ಮೊದಲಿದ್ದ ಸದಸ್ಯರನ್ನೇ ಪುನಃ ನೇಮಕ ಮಾಡಲಾಗಿದೆ.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರನ್ನಾಗಿ ಬಿದ್ದಾ­ಟಂಡ ಎಸ್‌. ತಮ್ಮಯ್ಯ ಅವರನ್ನು, ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರನ್ನಾಗಿ ಮಡಿಕೇರಿಯ ಕೊಲ್ಯದ ಗಿರೀಶ್‌ ಅವರನ್ನು ನೇಮಿಸಲಾಗಿದೆ. ಇದೇ ವೇಳೆ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯರನ್ನಾಗಿ ವಿಮರ್ಶಕ ಎಚ್‌.ಎಸ್‌. ರಾಘವೇಂದ್ರ ರಾವ್‌ ಅವರನ್ನು ನೇಮಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.