ಸುವರ್ಣ ಸೌಧ (ಬೆಳಗಾವಿ): ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಮಾಫಿಯಾಗಳು ಪ್ರಭಾವಶಾಲಿಯಾಗಿ ಬೆಳೆದಿದ್ದು ಇದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ವಿಧಾನಪರಿಷತ್ತಿನಲ್ಲಿ ಆಗ್ರಹಿಸಿದ ವಿರೋಧ ಪಕ್ಷದ ನಾಯಕ ಡಿ.ವಿ. ಸದಾನಂದಗೌಡ, ಬೆಂಗಳೂರಿನ ಎರಡು ಕಾಲೇಜುಗಳಲ್ಲಿ ಬೆಳಕಿಗೆ ಬಂದ ಅಂಕಪಟ್ಟಿ ಹಗರಣಗಳನ್ನು ಲೋಕಾಯುಕ್ತಕ್ಕೆ ವಹಿಸಬೇಕು ಎಂದು ಒತ್ತಾಯಿಸಿದರು.
ರಾಜೀವ ಗಾಂಧಿ ಆರೋಗ್ಯ ವಿವಿ ತಿದ್ದುಪಡಿ ಮಸೂದೆ ಕುರಿತು ಮಾತನಾಡಿದ ಅವರು, ಬೆಂಗಳೂರಿನ ಭೂ ಮಾಫಿಯಾದಂತೆ ವಿವಿಗಳಲ್ಲಿ ಅಂಕಪಟ್ಟಿ ಮಾಫಿಯಾ ಬೆಳೆದು ನಿಂತಿದೆ, ಆರೋಗ್ಯ ವಿವಿಗೆ ಸಂಬಂಧಿಸಿ ಬೆಂಗಳೂರಿನ ಎರಡು ಕಾಲೇಜುಗಳಲ್ಲಿ ಫೇಲಾದ ವಿದ್ಯಾರ್ಥಿನಿಯರನ್ನು ಪಾಸ್ ಮಾಡಿರುವುದು ಬೆಳಕಿಗೆ ಬಂದಿದೆ.
ಧಾರವಾಡದ ಕರ್ನಾಟಕ ವಿವಿಯಲ್ಲಿ ಹಣಕಾಸಿನ ಅವ್ಯವಹಾರ ನಡೆದಿರುವುದು ಲೆಕ್ಕ ಪರಿಶೋಧನಾ ಸಮಿತಿಯ ವರದಿಯಲ್ಲಿ ಬಹಿರಂಗವಾಗಿದೆ ಎಂದು ಹೇಳಿದರು. ಅಂಕಪಟ್ಟಿ ಹಗರಣಗಳಿಗೆ ಕುಲಪತಿಗಳು ಮತ್ತು ಕುಲಸಚಿವರನ್ನು ನೇರ ಹೊಣೆ ಮಾಡಬೇಕು, ಅವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.