ADVERTISEMENT

ವಿಶ್ವ ಕನ್ನಡ ಸಮ್ಮೇಳನ: ಸಾಹಿತಿಯೇ ಉದ್ಘಾಟಿಸಲಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2011, 16:45 IST
Last Updated 26 ಫೆಬ್ರುವರಿ 2011, 16:45 IST

ಕುಷ್ಟಗಿ: ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನ ಉದ್ಘಾಟನೆಗೆ ಇನ್ಫೋಸಿಸ್ ಅಧ್ಯಕ್ಷ ಎನ್.ಆರ್.ನಾರಾಯಣಮೂರ್ತಿ ಅವರನ್ನು ಆಹ್ವಾನಿಸಿರುವುದು ಸರಿಯಲ್ಲ. ಖ್ಯಾತ ಸಾಹಿತಿಯೊಬ್ಬರು ಸಮ್ಮೇಳನ ಉದ್ಘಾಟಿಸುವುದೇ ಹೆಚ್ಚು ಸೂಕ್ತ ಎಂದು ಕೊಪ್ಪಳ ಜಿಲ್ಲಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ.ಬಸವರಾಜ ಸಬರದ ಅಭಿಪ್ರಾಯಪಟ್ಟರು.

ಕನ್ನಡ ಸಾರಸ್ವತ ಲೋಕದ ಪ್ರತಿಷ್ಠಿತ ಕಾರ್ಯಕ್ರಮ ಎನಿಸಿರುವ ವಿಶ್ವ ಕನ್ನಡ ಸಮ್ಮೇಳನದ ಉದ್ಘಾಟನೆಗೆ ಉದ್ಯಮಿಗಳು, ಬಹುರಾಷ್ಟ್ರೀಯ ಕಂಪೆನಿಯ ಮುಖ್ಯಸ್ಥರನ್ನು ಆಹ್ವಾನಿಸುವುದು ಸರಿಯಲ್ಲ ಎಂದು ಅವರು ಅಧ್ಯಕ್ಷೀಯ ಭಾಷಣದಲ್ಲಿ ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.