ADVERTISEMENT

ವಿಷ್ಣು ಸಮಾಧಿ ಸ್ಥಳ ಅಭಿವೃದ್ಧಿ: ಸಿಎಂ ಭರವಸೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2017, 19:30 IST
Last Updated 11 ಡಿಸೆಂಬರ್ 2017, 19:30 IST
ಸುದೀಪ್‌
ಸುದೀಪ್‌   

ಬೆಂಗಳೂರು: ಚಿತ್ರ ನಟ ವಿಷ್ಣುವರ್ಧನ್‌ ಸಮಾಧಿ ಸ್ಥಳವನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಚಿತ್ರ ನಟ ಸುದೀಪ್‌ ಸೋಮವಾರ ಈ ಸಂಬಂಧ ಮುಖ್ಯಮಂತ್ರಿ ಜತೆ ಮಾತನಾಡಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ, ವಿಷ್ಣುವರ್ಧನ್‌ ಸಮಾಧಿ ಸ್ಥಳವನ್ನು ಪುಣ್ಯಭೂಮಿಯಾಗಿ ಅಭಿವೃದ್ಧಿಪಡಿಸಬೇಕು. ಸಮಾಧಿ ಸ್ಥಳವನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸಬಾರದು ಎಂದು ಮನವಿ ಮಾಡಿರುವುದಾಗಿ ತಿಳಿಸಿದರು.

‘ನಮ್ಮ ಬೇಡಿಕೆಗೆ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದರು’ ಎಂದು ಸುದೀಪ್‌ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.