ADVERTISEMENT

ವಿಷ ಉಣಿಸಿ ಪತ್ನಿ ಕೊಂದ ಕಾನ್‌ಸ್ಟೆಬಲ್

​ಪ್ರಜಾವಾಣಿ ವಾರ್ತೆ
Published 18 ಜುಲೈ 2017, 9:13 IST
Last Updated 18 ಜುಲೈ 2017, 9:13 IST
ವಿಷ ಉಣಿಸಿ ಪತ್ನಿ ಕೊಂದ ಕಾನ್‌ಸ್ಟೆಬಲ್
ವಿಷ ಉಣಿಸಿ ಪತ್ನಿ ಕೊಂದ ಕಾನ್‌ಸ್ಟೆಬಲ್   

ಯಾದಗಿರಿ: ಪೊಲೀಸ್ ಕಾನ್‌ಸ್ಟೆಬಲ್ ಪತ್ನಿಗೆ ವಿಷ ಉಣಿಸಿ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇಲ್ಲಿನ ನಗರಠಾಣೆಯ ಕಾನ್‌ಸ್ಟೆಬಲ್ ಮಹೇಂದ್ರ ಈ ಕೃತ್ಯವೆಸನಿದ್ದಾನೆ. ಹಣಮಂತಿ (26) ಕೊಲೆಯಾದ  ಮಹಿಳೆ.

ನಗರದ ಪೊಲೀಸ್ ವಸತಿ ಗೃಹದಲ್ಲಿ  ಭಾನುವಾರ ಮಧ್ಯರಾತ್ರಿ ವಿಷ ಕುಡಿಸಿ ಕೊಲೆ ಮಾಡಿದ್ದಾನೆ ಎಂದು ಮೃತಳ  ತಂದೆ ಈರಪ್ಪ ದೂರು ನೀಡಿದ್ದಾರೆ.

ADVERTISEMENT

ಆರೋಪಿ ತಲೆಮರೆಸಿಕೊಂಡಿದ್ದು, ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ವರದಿ ಬಂದ ನಂತರ ಮುಂದಿನ ಕ್ರಮಕೈಗೊಳ್ಳುವುದಾಗಿ ನಗರಠಾಣೆ ಪಿಎಸ್ಐ ಮಹಾಂತೇಶ್ ಸಜ್ಜನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.