ರಂಭಾಪುರಿ ಪೀಠ (ಬಾಳೆಹೊನ್ನೂರು): ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರು ಬೆಂಗಳೂರಿನ ಸಮಾರಂಭವೊಂದರಲ್ಲಿ ಲಿಂಗಾಯತರು ಇಷ್ಟಲಿಂಗ ಆರಾಧಕರು, ವೀರಶೈವರು ಮೂರ್ತಿ ಆರಾಧಕರು ಎಂದು ತಪ್ಪಾಗಿ ಅರ್ಥೈಸಿಕೊಂಡು ಹೇಳಿಕೆ ನೀಡಿದ್ದಾರೆ ಎಂದು ರಂಭಾಪುರಿ ಪೀಠದ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ತಿಳಿಸಿದರು.
ರಂಭಾಪುರಿ ಪೀಠದಲ್ಲಿ ಸೋಮವಾರ ಪೇಜಾವರಶ್ರೀ ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ‘ವೀರಶೈವ ಧರ್ಮವಾಚಕ, ಲಿಂಗಾಯತ ಕ್ರಿಯಾವಾಚಕ. ವೀರಶೈವ ಲಿಂಗಾಯತರಿಗೆ ಇಷ್ಟಲಿಂಗ ಪೂಜಾ ಪ್ರಧಾನ ಮತ್ತು ಮುಖ್ಯವಾಗಿರುತ್ತದೆ. ಇಷ್ಟಲಿಂಗದಲ್ಲಿ ಸಮರಸ-ಮೂರ್ತಿ ಪೂಜೆಯಲ್ಲಿ ಔಪಚಾರಿಕ ಭಾವನೆಯಿಂದ ಪೂಜಿಸುವ ಸಂಪ್ರದಾಯ ಬೆಳೆದು ಬಂದಿದೆ. ಹೀಗಿರುವಾಗ ಲಿಂಗಾಯತರಷ್ಟೇ ಇಷ್ಟಲಿಂಗ ಪೂಜಾ ಆರಾಧಕರು, ವೀರಶೈವರು ಮೂರ್ತಿ ಆರಾಧಕರು ಎಂಬುದು ಒಪ್ಪಿಕೊಳ್ಳುವ ಮಾತಲ್ಲ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.