ದಾವಣಗೆರೆ: ವೀರಶೈವ ಪಂಚಮಸಾಲಿ ಗುರುಪೀಠಕ್ಕೆ ನೂತನ ಸ್ವಾಮೀಜಿಯಾಗಿ ಶ್ವಾಸ ಗುರು ವಚನಾನಂದ ಸ್ವಾಮೀಜಿ ಆಯ್ಕೆಯಾಗಿದ್ದಾರೆ.
ಜಗದ್ಗುರು ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ ಅವರು ಬುಧವಾರ ಘೋಷಣೆ ಮಾಡಿದರು.
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ಬಳಿ ವೀರಶೈವ ಪಂಚಮಸಾಲಿ ಜಗದ್ಗುರು ಪೀಠ ಇದೆ.
ಪೀಠದ ಧರ್ಮದರ್ಶಿ ಸಮಿತಿ ಸಭೆಯಲ್ಲಿ ವಚನಾನಂದ ಸ್ವಾಮೀಜಿ ಅವರ ಆಯ್ಕೆಗೆ ಸಮಿತಿ ಸಮ್ಮತಿಸಿದೆ. ಇದೇ 20ರಂದು ವಚನಾನಂದ ಸ್ವಾಮೀಜಿಗೆ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಲಿದೆ.
ಪೀಠಕ್ಕಾಗಿ 40 ಜನ ಸ್ವಾಮೀಜಿಗಳ ಸಂದರ್ಶನ ನಡೆಸಲಾಗಿದೆ. ಇವರಲ್ಲಿ ವಚನಾನಂದ ಸ್ವಾಮೀಜಿ ಆಯ್ಕೆಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.