ಮಂಗಳೂರು: ನಗರದ ಬೋಳಾರದ ಮುಳಿಹಿತ್ಲುವಿನಲ್ಲಿ ಗುರುವಾರ ತಡರಾತ್ರಿ ವೈದ್ಯೆಯೊಬ್ಬರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಮನೆಯಲ್ಲಿದ್ದ ಪತ್ರಕರ್ತರೊಬ್ಬರನ್ನೂ ವಿಚಾರಣೆ ನಡೆಸಿದ್ದಾರೆ.
ಚುನಾವಣಾ ಅಕ್ರಮ ತಡೆಗೆ ಕಾರ್ಯಾಚರಣೆ ನಡೆಸುತ್ತಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಿಶೇಷ ತಂಡ ಈ ದಾಳಿ ನಡೆಸಿದೆ. ಮನೆಯಲ್ಲಿದ್ದ ವೈದ್ಯೆ, ಅವರ ಪತಿ ಮತ್ತು ಪತ್ರಕರ್ತರೊಬ್ಬರನ್ನು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸ್ ಬಿಗಿ ಭದ್ರತೆಯಲ್ಲಿ ಕಾರ್ಯಾಚರಣೆ ನಡೆದಿದೆ. ವೈದ್ಯೆಯ ಮನೆಯಿಂದ ಹಣ ಅಥವಾ ದಾಖಲೆಗಳನ್ನು ವಶಕ್ಕೆ ಪಡೆದ ಕುರಿತು ಐಟಿ ಅಧಿಕಾರಿಗಳಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.