ಶ್ರೀನಿವಾಸಪುರ:‘ ಕಾಂಗ್ರೆಸ್ ಪಕ್ಷದಲ್ಲಿ ಶಕುನಿಗಳ ಸಂತಾನ ಹೆಚ್ಚುತ್ತಿದೆ. ರಾಜಕಾರಣಿಗಳು ಲಾಭ -ನಷ್ಟದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ರಾಜಕೀಯ ಹರಾಜಿನ ಸರಕಾಗಿದೆ. ಅಂತಹ ರಾಜಕಾರಣ ನನಗೆ ಬೇಡ’ ಎಂದು ಆರೋಗ್ಯ ಸಚಿವ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಗಂಗನ್ನಗಾರಿಪಲ್ಲಿ ಗ್ರಾಮದಲ್ಲಿ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಏಕಲವ್ಯ ವಸತಿ ಶಾಲೆ ಉದ್ಘಾಟಿಸಿ ಮಾತನಾಡಿದ ಅವರು,‘ ಸಂಸದ ಕೆ.ಎಚ್.ಮುನಿಯಪ್ಪ ಅವರು, ನನ್ನನ್ನು ಕರ್ಣನಾಗದೆ ಅರ್ಜುನ ಆಗಬೇಕು. ತಾವು ಕೃಷ್ಣನಾಗುವುದಾಗಿ ಹೇಳಿದ್ದಾರೆ.
ಆದರೆ ಕಾಂಗ್ರೆಸ್ ಪಕ್ಷದಲ್ಲಿ ಹಾವಾಡಿಗರು ಹೆಚ್ಚಾಗಿದ್ದಾರೆ. ರಾಜಕಾರಣ ವ್ಯಾಪಾರವಾಗಿದೆ. ಇಂದಿರಾಗಾಂಧಿ ಅವರಂಥ ರಾಜಕಾರಣಿ ಬೇಕಾಗಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.