ADVERTISEMENT

ಶರಾವತಿ ಹಿನ್ನೀರಿನಲ್ಲಿ 4 ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2012, 19:30 IST
Last Updated 11 ಜನವರಿ 2012, 19:30 IST

ಹೊಸನಗರ (ಶಿವಮೊಗ್ಗ ಜಿಲ್ಲೆ): ತಾಲ್ಲೂಕಿನ ಅರಮನೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶರಾವತಿ ಹಿನ್ನೀರಿನ ಬಿಲ್‌ಸಾಗರ ಎಂಬಲ್ಲಿ 4 ಮೃತ ದೇಹಗಳು ಬುಧವಾರ ಸಂಜೆ ಪತ್ತೆಯಾಗಿವೆ.

ಮೃತಪಟ್ಟವರನ್ನು ತ್ರಿಣಿವೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾರ್ಗಡಿ ಗ್ರಾಮದ ವಿಧವೆ ಗೀತಾ, ಅವರ ಎರಡು ಗಂಡು ಮಕ್ಕಳಾದ ರಕ್ಷಿತ್ (11), ಗಗನ್ (7) ಹಾಗೂ ಪ್ರಿಯಕರ ವಡ್ಡಿಕಣಿವೆ ಗೋಪಾಲ ಎಂದು ಗುರುತಿಸಲಾಗಿದೆ.

ಎರಡು ಮಕ್ಕಳ ತಾಯಿ ಗೀತಾ ಹಾಗೂ ಗೋಪಾಲ ನಡುವಿನ ಅನೈತಿಕ ಸಂಬಂಧ ಕುರಿತಂತೆ ಗ್ರಾಮಸ್ಥರು ಈಚೆಗೆ ಛೀಮಾರಿ ಹಾಕಿ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಶರಾವತಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ADVERTISEMENT

ಹೊಸನಗರ ತಾಲ್ಲೂಕಿನ ನಗರ ಪೊಲೀಸ್ ಠಾಣೆ ಪಿಎಸ್‌ಐ ಸಂತೋಷ್‌ರಾಮ್ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.