ಬೆಂಗಳೂರು: ಅಂಗನವಾಡಿಯಿಂದ 5ನೇ ತರಗತಿ ಅಥವಾ 7ನೇ ತರಗತಿವರೆಗಿನ ಮಕ್ಕಳಿಗೆ ಹಾಲು ನೀಡುವ ಬಗ್ಗೆ ಚರ್ಚೆ ನಡೆದಿದೆ. ಆದರೆ, ಯಾವ ತರಗತಿವರೆಗಿನ ಮಕ್ಕಳಿಗೆ ನೀಡಬೇಕು ಎಂಬುದು ಇನ್ನೂ ಅಂತಿಮವಾಗಿಲ್ಲ ಎಂದು ಪಶುಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.
ಕರ್ನಾಟಕ ಹಾಲು ಮಹಾಮಂಡಲಕ್ಕೆ (ಕೆಎಂಎಫ್) ಪೂರೈಕೆ ಆಗುವ ಹಾಲಿನ ಪ್ರಮಾಣ ಹೆಚ್ಚಾಗಿದೆ. ಹಾಲನ್ನು ಪೌಡರ್ ಆಗಿ ಪರಿವರ್ತಿಸಲು ಅಧಿಕ ವೆಚ್ಚವಾಗುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಮಕ್ಕಳಿಗೆ ಹಾಲು ನೀಡಲು ತೀರ್ಮಾನಿಸಲಾಗಿದೆ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.
ತಿಂಗಳಿಗೆ 54 ಲಕ್ಷ ಲೀಟರ್ ಹಾಲು ಪೂರೈಕೆ ಆಗುತ್ತಿದೆ. ಆದರೆ, ಬಳಕೆ ಆಗುತ್ತಿರುವುದು 34 ಲಕ್ಷ ಲೀಟರ್ ಮಾತ್ರ. ಹೆಚ್ಚುವರಿಯಾಗಿ 20 ಲಕ್ಷ ಲೀಟರ್ ಸಂಗ್ರಹವಾಗುತ್ತಿದೆ. ಈ ಪೈಕಿ ಹತ್ತು ಲಕ್ಷ ಲೀಟರ್ ಹಾಲನ್ನು ತಮಿಳುನಾಡಿಗೆ ಕಳುಹಿಸುತ್ತಿದ್ದರೆ, ಇನ್ನುಳಿದ ಹತ್ತು ಲಕ್ಷ ಲೀಟರ್ ಹಾಲನ್ನು ಪೌಡರ್ ಆಗಿ ಪರಿವರ್ತಿಸಲಾಗುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.