ADVERTISEMENT

ಶಾಲೆಗೆ ಪೋಷಕರ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 20:00 IST
Last Updated 18 ಡಿಸೆಂಬರ್ 2013, 20:00 IST

ಗದಗ: ನಗರದ ಸಿಡಿಒ ಜೈನ್‌ ಶಾಲೆಯ ಮಕ್ಕಳಿಗೆ ಆಡಳಿತ ಮಂಡಳಿ ಸದಸ್ಯರೊಬ್ಬರು ಥಳಿಸಿದ್ದಾರೆ ಎಂದು ಆರೋಪಿಸಿ ಪೋಷಕರು ಬುಧವಾರ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಆಡಳಿತ ಮಂಡಳಿ ಸದಸ್ಯ ಕುಮಾರ ಲಾಲಕ ಎಂಬುವರು ಕೆಲ ದಿನಗಳ ಹಿಂದೆ ಶಾಲೆಯ ಮಕ್ಕಳಿಗೆ ತೀವ್ರವಾಗಿ ಥಳಿಸಿದ್ದರು ಎನ್ನ ಲಾಗಿದೆ. ಈ ವಿಷಯವನ್ನು ಮಕ್ಕಳು ಪೋಷಕರ ಗಮನಕ್ಕೆ ತಂದರು. ಬೆಳಿಗ್ಗೆ ಶಾಲೆಗೆ ಆಗಮಿಸಿದ ಪೋಷಕರು ಶಿಕ್ಷಕರು ಮತ್ತು ಆಡಳಿತ ಮಂಡಳಿ ಸದಸ್ಯರನ್ನು ತರಾಟೆಗೆ ತೆಗೆದುಕೊಂಡರು.

ಕೂಡಲೇ ಸದಸ್ಯರನ್ನು ವಜಾ ಮಾಡಬೇಕು ಎಂದು ಪಟ್ಟು ಹಿಡಿದರು. ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಮಾತಿನ ಚಕಮಕಿ ನಡೆಯಿತು. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸು ವುದಾಗಿ ಆಡಳಿತ ಮಂಡಳಿ ಭರವಸೆ ನೀಡಿದ ಬಳಿಕ ಪೋಷಕರು ಸಮಾಧಾನಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.