ADVERTISEMENT

ಶಿಕಾರಿಪುರದಿಂದಲೇ ಸ್ಪರ್ಧೆ: ಬಿಎಸ್‌ವೈ

ತೇರದಾಳ ಕ್ಷೇತ್ರದಿಂದ ಸ್ಪರ್ಧೆ ಇಲ್ಲ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2017, 5:17 IST
Last Updated 6 ಅಕ್ಟೋಬರ್ 2017, 5:17 IST
ಶಿಕಾರಿಪುರದಿಂದಲೇ ಸ್ಪರ್ಧೆ: ಬಿಎಸ್‌ವೈ
ಶಿಕಾರಿಪುರದಿಂದಲೇ ಸ್ಪರ್ಧೆ: ಬಿಎಸ್‌ವೈ   

ಬಾಗಲಕೋಟೆ: ‘ಜನರ ಒತ್ತಾಯದ ಮೇರೆಗೆ ಶಿಕಾರಿಪುರ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

‘ತೇರದಾಳ ಕ್ಷೇತ್ರದಿಂದ ಬಿಜೆಪಿ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದು ಸವದಿ ಸ್ಪರ್ಧೆ ಖಚಿತ. ಈಗಾಗಲೆ ಈ ಬಗ್ಗೆ ಚರ್ಚೆ ಆಗಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ. ನಾನು ಶಿಕಾರಿಪುರ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುವ ನಿಟ್ಟಿನಲ್ಲಿ ಹೈಕಮಾಂಡ್ ಮನವೊಲಿಸುತ್ತೇನೆ’ ಎಂದಿದ್ದಾರೆ.

‘ಎಸಿಬಿ ಸಂಸ್ಥೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಕ್ಷಣೆ ಮಾಡುವ ಸಂಸ್ಥೆಯಾಗಿದೆ. ಐಟಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ಅಪಹಾಸ್ಯಕ್ಕೆ ಈಡಾಗುವಂತದ್ದು. ಇನ್ನು ಕೆಲ ಸಚಿವರ ಮನೆ ಮೇಲೆ ಐಟಿ ದಾಳಿಯಾಗುವ ಸಾಧ್ಯತೆ ಇದೆ. ಆ ಭಯದಿಂದ ಸಿದ್ದರಾಮಯ್ಯ ಈ ರೀತಿ ಮಾಡಲು ಮುಂದಾಗುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಪುಟ್ಟಸ್ವಾಮಿಯವರು ಸರ್ಕಾರದ ಹಗರಣಗಳ ದಾಖಲೆ ಬಿಡುಗಡೆ ಮಾಡಲಿದ್ದಾರೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.