ಬೆಂಗಳೂರು: ಹತ್ತು ಸಾವಿರ ಶಿಕ್ಷಕರ ನೇಮಕಾತಿಯ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಳಿಕ ಎನ್. ಮಹೇಶ್ ಮಂಗಳವಾರ ಪ್ರಕಟಿಸಿದರು.
ನಗರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, '1:2 ಅನುಪಾತದಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಅವರಲ್ಲಿ ಎಷ್ಟು ಜನ ಬರುತ್ತಾರೆ ಎಂದು ಡಿಡಿಪಿಐಗಳು ಪರಿಶೀಲಿಸಿ, (1:1) ಅನುಪಾತದಲ್ಲಿ ಜುಲೈ 29ಕ್ಕೆ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ’ ಎಂದು ಹೇಳಿದರು.
‘ಆಗಸ್ಟ್ 5ರಿಂದ ಅವರಿಗೆ ಕೌನ್ಸೆಲಿಂಗ್ ನಡೆಯಲಿದೆ. ಈ ಎಲ್ಲಾ ಪ್ರಕ್ರಿಯೆ ಎರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ’ ಎಂದರು.
‘ಖಾಲಿಯಿರುವ ಎಲ್ಲಾ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. 10 ಸಾವಿರ ಪದವೀಧರ ಶಿಕ್ಷಕರು ಕೆಲಸಕ್ಕೆ ಸೇರಿದ ತಕ್ಷಣ ಅತಿಥಿ ಶಿಕ್ಷಕರು ಹುದ್ದೆ ರದ್ದಾಗಲಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.