ಬೆಂಗಳೂರು: ಲಂಚ ಪಡೆದು ಲೋಕಾಯುಕ್ತ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಕೆಜಿಎಫ್ ಶಾಸಕ ವೈ.ಸಂಪಂಗಿ, ಶಿಕ್ಷೆಯ ರದ್ದತಿಗೆ ಕೋರಿ ಸೋಮವಾರ ಹೈಕೋರ್ಟ್ ಮೊರೆ ಹೋಗಿದ್ದಾರೆ.
ನಿವೇಶನ ವಿವಾದ ಇತ್ಯರ್ಥಪಡಿಸಲು ಉದ್ಯಮಿ ಹುಸೇನ್ ಮೊಯಿನ್ ಫಾರೂಕ್ ಅವರಿಂದ ಐದು ಲಕ್ಷ ರೂಪಾಯಿ ಲಂಚ ಪಡೆದಿರುವ ವಿವಾದ ಇದಾಗಿದೆ. ಇವರಿಗೆ ಮೂರೂವರೆ ವರ್ಷ ಜೈಲು ಶಿಕ್ಷೆ ಹಾಗೂ 90 ಸಾವಿರ ರೂಪಾಯಿಗಳ ದಂಡ ವಿಧಿಸಿ ವಿಶೇಷ ನ್ಯಾಯಾಲಯ ಕಳೆದ ಶನಿವಾರ ಆದೇಶಿಸಿದೆ.
ಈ ಆದೇಶ ರದ್ದತಿಗೆ ಹೈಕೋರ್ಟ ಅನ್ನು ಕೋರಿರುವ ಸಂಪಂಗಿ, ವಿಚಾರಣೆ ಮುಗಿಯುವವರೆಗೆ ತಮಗೆ ಜಾಮೀನು ನೀಡಬೇಕು ಎಂದೂ ಮನವಿ ಸಲ್ಲಿಸಿದ್ದಾರೆ.ವಿಶೇಷ ನ್ಯಾಯಾಧೀಶರು ಕೇವಲ ಊಹೆಯ ಆಧಾರದ ಮೇಲೆ ತಮ್ಮ ವಿರುದ್ಧ ಆದೇಶ ಹೊರಡಿಸಿದ್ದಾರೆ. ತಾವು ಯಾವುದೇ ರೀತಿಯ ತಪ್ಪು ಎಸಗಿಲ್ಲ ಎನ್ನುವುದು ಸಂಪಂಗಿ ಆರೋಪ. ಈ ಅರ್ಜಿಯು ಮಂಗಳವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.