ADVERTISEMENT

ಶಿಲುಬೆ ಕಟ್ಟೆ ಧ್ವಂಸ: ದುಷ್ಕರ್ಮಿಗಳ ಪತ್ತೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 10 ಜನವರಿ 2014, 20:11 IST
Last Updated 10 ಜನವರಿ 2014, 20:11 IST

ಯಾದಗಿರಿ:  ತಾಲ್ಲೂಕಿನ ಠಾಣಾ­ಗುಂದಿ ಗ್ರಾಮದ ಹೊರವಲಯದ­ಲ್ಲಿರುವ ಶಿಲುಬೆ ಕಟ್ಟೆಯನ್ನು ಧ್ವಂಸ­ಗೊಳಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಗ್ರಾಮಕ್ಕೆ ಹೊಂದಿಕೊಂಡಿರುವ ಈ ಕಟ್ಟೆಗೆ ಶಿಲುಬೆ ಕಟ್ಟೆ ಎಂದು ಕರೆಯ­ಲಾ­ಗುತ್ತಿದ್ದು, ಕಳೆದ ರಾತ್ರಿ ದುಷ್ಕರ್ಮಿ­ಗಳು ಕಟ್ಟಿಗೆಯ ಶಿಲುಬೆ ಧ್ವಂಸ­ಗೊಳಿಸಿದ್ದಾರೆ. ಇದಲ್ಲದೇ ಸುತ್ತಲೂ ಇದ್ದ ಕಬ್ಬಿಣದ ಶಿಲುಬೆಗಳನ್ನೂ ಧ್ವಂಸ­ಗೊಳಿಸಲಾಗಿದೆ. ಪ್ರತಿವರ್ಷ ಈಸ್ಟರ್ ಸಂದರ್ಭದಲ್ಲಿ ಇಲ್ಲಿ ಕ್ರಿಶ್ಚಿಯನ್ನರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಇದೀಗ ಕ್ರಿಸ್ಮಸ್‌ ಮುಗಿದು ಈಸ್ಟರ್ ಬರಲು ತಿಂಗಳು ಬಾಕಿ ಇರುವಾಗಲೇ ಇಂತಹ ದುಷ್ಕೃತ್ಯ ನಡೆದಿದೆ.

ಸ್ಥಳಕ್ಕೆ ಸರ್ಕಲ್ ಇನ್ಸ್‌ಪೆಕ್ಟರ್ ಬಾಲಚಂದ್ರ ಲಕ್ಕಂ, ಗ್ರಾಮೀಣ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಮಲ್ಲಿಕಾರ್ಜುನ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.