ADVERTISEMENT

ಶೀಘ್ರದಲ್ಲೇ ರಾಜ್ಯದ ಬರಪೀಡಿತ ಪ್ರದೇಶಗಳ ಘೋಷಣೆ: ಸಿಎಂ

​ಪ್ರಜಾವಾಣಿ ವಾರ್ತೆ
Published 18 ಜುಲೈ 2017, 16:44 IST
Last Updated 18 ಜುಲೈ 2017, 16:44 IST
ಶೀಘ್ರದಲ್ಲೇ ರಾಜ್ಯದ ಬರಪೀಡಿತ ಪ್ರದೇಶಗಳ ಘೋಷಣೆ: ಸಿಎಂ
ಶೀಘ್ರದಲ್ಲೇ ರಾಜ್ಯದ ಬರಪೀಡಿತ ಪ್ರದೇಶಗಳ ಘೋಷಣೆ: ಸಿಎಂ   

ಬೆಂಗಳೂರು: ಮಳೆ ಪರಿಸ್ಥಿತಿ ಅವಲೋಕಿಸಿ ಸಧ್ಯದಲ್ಲಿಯೇ ಬರ ಪೀಡಿತ ಪ್ರದೇಶಗಳ ಹೆಸರು, ವಿವರಗಳನ್ನು ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ರಾಜ್ಯದ 174 ತಾಲ್ಲೂಕುಗಳ ಪೈಕಿ ಕಳೆದ ವರ್ಷ ಮುಂಗಾರು ವೈಫಲ್ಯದಿಂದಾಗಿ 139 ತಾಲ್ಲೂಕುಗಳನ್ನು ಹಾಗೂ ಹಿಂಗಾರು ವೈಫಲ್ಯದಿಂದಾಗಿ 160 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಈ ವರ್ಷ ಜುಲೈ ತಿಂಗಳು ಕೊನೆಯಾಗುತ್ತಾ ಬಂದರೂ ವರುಣ ಕೃಪೆ ತೋರಿಲ್ಲ, ಜಲಾಶಯಗಳಲ್ಲಿ ನೀರಿಲ್ಲ, ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಜಲಾಶಯಗಳಲ್ಲಿ ಕಳೆದ ವರ್ಷ ಈ ಅವಧಿಯಲ್ಲಿ 84 ಟಿಎಂಸಿ ನೀರು ಸಂಗ್ರಹವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT