ADVERTISEMENT

ಶೀಘ್ರ ಶರತ್ ಹತ್ಯೆ ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 14 ಜುಲೈ 2017, 13:30 IST
Last Updated 14 ಜುಲೈ 2017, 13:30 IST
ಶೀಘ್ರ ಶರತ್ ಹತ್ಯೆ ಆರೋಪಿಗಳ ಬಂಧನ
ಶೀಘ್ರ ಶರತ್ ಹತ್ಯೆ ಆರೋಪಿಗಳ ಬಂಧನ   

ಮಂಗಳೂರು: ಶರತ್ ಹತ್ಯೆ ಪ್ರಕರಣದಲ್ಲಿ ಮಹತ್ವದ ಸುಳಿವು ಲಭ್ಯವಾಗಿದ್ದು, ಶೀಘ್ರ ನಿಜವಾದ ಆರೋಪಿಗಳನ್ನು ಬಂಧಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ರೂಪಕುಮಾರ್ ದತ್ತ ತಿಳಿಸಿದರು.

ವಿಚಾರಣೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ. ಸಾಕಷ್ಟು ಮಾಹಿತಿ ಲಭ್ಯವಾಗಿದೆ. ಈವರೆಗೂ ಯಾರನ್ನು ಬಂಧಿಸಿಲ್ಲ. ಸಂಶಯ ಇದ್ದವರನ್ನು ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಕಾರ್ತಿಕ್ ರಾಜ್ ಕೊಲೆ ಪ್ರಕರಣದಲ್ಲಿ 5 ತಿಂಗಳು ತನಿಖೆ ನಡೆಸಿ, ನಿಜವಾದ ಆರೋಪಿಗಳನ್ನು ಬಂಧಿಸಲಾಗಿದೆ. ಅದೇ ರೀತಿ ಶರತ್ ಪ್ರಕರಣದಲ್ಲಿಯೂ ನಿಜವಾದ ಆರೋಪಿಗಳನ್ನು ಬಂಧಿಸಲಾಗುವುದು. ನಿರಪರಾಧಿಗಳಿಗೆ ಪೊಲೀಸರು ಯಾವುದೇ ತೊಂದರೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.