ಶೃಂಗೇರಿ: ತಾಲ್ಲೂಕಿನ ನೆಮ್ಮಾರು ಗ್ರಾಮ ಪಂಚಾಯತಿಯ ಕೃಷಿಕರೊಬ್ಬರ ಮನೆಗೆ ನಕ್ಸಲರು ಭೇಟಿ ನೀಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ರಾತ್ರಿ 8 ಗಂಟೆ ಸುಮಾರಿಗೆ ನಾಯಿನಾಡಿನ ಕೃಷಿಕ ಆನಂದರಾವ್ ಅವರ ಮನೆಗೆ ಮುಂಡಗಾರು ಲತಾ ನೇತೃತ್ವದ ನಾಲ್ವರು ನಕ್ಸಲರು ಭೇಟಿ ನೀಡಿದ್ದು, ಸ್ಥಳೀಯ ಸಮಸ್ಯೆಗಳು ಹಾಗೂ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಒತ್ತುವರಿ ಸಮಸ್ಯೆ ಹಾಗೂ ಹುಲಿಯೋಜನೆ ಕುರಿತು ಮಾಹಿತಿ ಪಡೆಯುವುದರೊಂದಿಗೆ ನಕ್ಸಲ್ ಸಂಘಟನೆಗೆ ಬೆಂಬಲ ನೀಡುವಂತೆ ಕೋರಿ ಪ್ರತಿ ವರ್ಷ 25 ಸಾವಿರ ದೇಣಿಗೆ ನೀಡುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.