ADVERTISEMENT

ಶ್ರೀನಿವಾಸ ಜಿ.ಕಪ್ಪಣ್ಣಗೆ ಶ್ರೀ ಶಿವಕುಮಾರ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2017, 19:30 IST
Last Updated 19 ಅಕ್ಟೋಬರ್ 2017, 19:30 IST
ಶ್ರೀನಿವಾಸ ಜಿ.ಕಪ್ಪಣ್ಣಗೆ ಶ್ರೀ ಶಿವಕುಮಾರ ಪ್ರಶಸ್ತಿ
ಶ್ರೀನಿವಾಸ ಜಿ.ಕಪ್ಪಣ್ಣಗೆ ಶ್ರೀ ಶಿವಕುಮಾರ ಪ್ರಶಸ್ತಿ   

ಹೊಸದುರ್ಗ (ಚಿತ್ರದುರ್ಗ ಜಿಲ್ಲೆ): ತಾಲ್ಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಶಿವಕುಮಾರ ಕಲಾ ಸಂಘದಿಂದ ನೀಡುವ ವಾರ್ಷಿಕ ‘ಶ್ರೀ ಶಿವಕುಮಾರ ಪ್ರಶಸ್ತಿ'ಗೆ ಈ ಬಾರಿ ರಂಗ ಸಂಘಟಕ ಶ್ರೀನಿವಾಸ ಜಿ.ಕಪ್ಪಣ್ಣ  ‌ಆಯ್ಕೆಯಾಗಿದ್ದಾರೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಶ್ರೀನಿವಾಸ ಜಿ.ಕಪ್ಪಣ್ಣ ಅವರ ಜೀವಮಾನದ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಣೇಹಳ್ಳಿಯಲ್ಲಿ ನವೆಂಬರ್ 9ರಂದು ನಡೆಯಲಿರುವ 2017ರ ರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪ್ರಶಸ್ತಿಯು ₹ 50,000 ನಗದು, ಅಭಿನಂದನಾ ಪತ್ರ, ಫಲಕ ಒಳಗೊಂಡಿದೆ. ಕಲಾ ಸಂಘವು 13 ವರ್ಷಗಳಿಂದ ರಂಗಭೂಮಿಯಲ್ಲಿ ದುಡಿದವರನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.