ADVERTISEMENT

ಶ್ರೀನಿವಾಸ ರೆಡ್ಡಿ ಬಳ್ಳಾರಿಗೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2011, 5:10 IST
Last Updated 17 ಸೆಪ್ಟೆಂಬರ್ 2011, 5:10 IST

ಹೈದರಾಬಾದ್ (ಐಎಎನ್‌ಎಸ್): ಆಂಧ್ರದ ಅನಂತ್‌ಪುರಂ ಜಿಲ್ಲೆಯಲ್ಲಿ  ವಶಪಡಿಸಿಕೊಳ್ಳಲಾದ 4.9 ಕೋಟಿ ರೂ ಮೊತ್ತದ ಭಾರಿ ಹಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಓಬಳಾಪುರಂ ಗಣಿ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ ರೆಡ್ಡಿ ಅವರನ್ನು ಸಿಬಿಐ ಬಳ್ಳಾರಿಗೆ ಕರೆ ತಂದಿದೆ.

ಈ ಸಂಬಂಧ ಬಂಧಿತರಾಗಿರುವ ಇಬ್ಬರು ವ್ಯಕ್ತಿಗಳು ವಶಪಡಿಸಿಕೊಳ್ಳಲಾದ ಭಾರಿ ಮೊತ್ತದ ಹಣವು ಶ್ರೀನಿವಾಸ ರೆಡ್ಡಿ ಅವರಿಗೆ ಸೇರಿದ್ದು ಎಂದು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ. 

ಬಳ್ಳಾರಿಯಲ್ಲಿನ ಶ್ರೀನಿವಾಸ ರೆಡ್ಡಿ ಅವರಿಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ ಎಂದ ಮೂಲಗಳು ತಿಳಿಸಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT