ADVERTISEMENT

ಶ್ರೀರಾಮುಲು ಉಪವಾಸ ಅಂತ್ಯ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2011, 19:30 IST
Last Updated 19 ಸೆಪ್ಟೆಂಬರ್ 2011, 19:30 IST

ಬಳ್ಳಾರಿ: ಮೆದು ಕಬ್ಬಿಣ ಉತ್ಪಾದನಾ ಘಟಕಗಳಿಗೆ ಅಗತ್ಯ ಪ್ರಮಾಣದ ಅದಿರು ಪೂರೈಸುವುದೂ ಸೇರಿದಂತೆ ಇನ್ನುಳಿದ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ಸರ್ಕಾರದ ಜತೆ ಮಾತನಾಡುವುದಾಗಿ ಮುಖ್ಯಮಂತ್ರಿ ಸದಾನಂದಗೌಡ  ಭರವಸೆ ನೀಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಸೋಮವಾರ  ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು.

ಇದರೊಂದಿಗೆ, ಮೆದು ಕಬ್ಬಿಣ ಉತ್ಪಾದಕರ ಸಂಘವೂ  ಮುನ್ಸಿಪಲ್ ಕಾಲೇಜು ಮೈದಾನದಲ್ಲಿ 6 ದಿನಗಳಿಂದ ಹಮ್ಮಿಕೊಂಡಿದ್ದ ಸರದಿ ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿತು.

ಡೆಂಗೆ ಶಂಕೆ: ಇಬ್ಬರ ಸಾವು
ರೋಣ: ತಾಲ್ಲೂಕಿನ ಹಿರೇಹಾಳ ಗ್ರಾಮದಲ್ಲಿ ತೀವ್ರ ಜ್ವರದಿಂದ ಇಬ್ಬರು ಮೃತಪಟ್ಟಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.