ಬೆಂಗಳೂರು: ಬಾದಾಮಿಯ ಬಿಜೆಪಿ ಅಭ್ಯರ್ಥಿ ಶೀರಾಮುಲು ಪರವಾಗಿ ನಟ ಸುದೀಪ್ ಪ್ರಚಾರ ಕೈಗೊಳ್ಳಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಸುದೀಪ್ ಅವರು ಶ್ರೀರಾಮುಲು ವಿರುದ್ಧ ಪ್ರಚಾರ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಸುದೀಪ್ ಅವರು, ನಾನು ಶ್ರೀರಾಮುಲು ಅವರ ಪರ ಪ್ರಚಾರ ಕೈಗೊಳ್ಳುತ್ತೇನೆ ಎಂಬ ವಿಚಾರದಲ್ಲಿ ಯಾವುದೇ ಸತ್ಯಾಂಶವಿಲ್ಲ. ಶ್ರೀರಾಮುಲು ಅವರು ನನಗೆ ಬಹಳ ವರ್ಷಗಳಿಂದ ಗೊತ್ತಿರುವ ವ್ಯಕ್ತಿ. ಅವರಿಗೆ ಒಳ್ಳೆಯದಾಗಲಿ ಎಂದು ಶುಭಹಾರೈಸುತ್ತೇನೆ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.