ADVERTISEMENT

ಸಂಪುಟ ವಿಸ್ತರಣೆ: ರಾಮಲಿಂಗಾರೆಡ್ಡಿ ಹೆಗಲಿಗೆ ಗೃಹ ಖಾತೆ, ರೇವಣ್ಣಗೆ ಅರಣ್ಯ; ತಿಮ್ಮಾಪೂರ್‌ಗೆ ಅಬಕಾರಿ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2017, 14:15 IST
Last Updated 1 ಸೆಪ್ಟೆಂಬರ್ 2017, 14:15 IST
ಸಂಪುಟ ವಿಸ್ತರಣೆ: ರಾಮಲಿಂಗಾರೆಡ್ಡಿ ಹೆಗಲಿಗೆ ಗೃಹ ಖಾತೆ, ರೇವಣ್ಣಗೆ ಅರಣ್ಯ; ತಿಮ್ಮಾಪೂರ್‌ಗೆ ಅಬಕಾರಿ
ಸಂಪುಟ ವಿಸ್ತರಣೆ: ರಾಮಲಿಂಗಾರೆಡ್ಡಿ ಹೆಗಲಿಗೆ ಗೃಹ ಖಾತೆ, ರೇವಣ್ಣಗೆ ಅರಣ್ಯ; ತಿಮ್ಮಾಪೂರ್‌ಗೆ ಅಬಕಾರಿ   

ಬೆಂಗಳೂರು: ಜಿ. ಪರಮೇಶ್ವರ ಅವರಿಂದ ತೆರವಾದ ಗೃಹ ಖಾತೆಯನ್ನು ರಾಮಲಿಂಗಾರೆಡ್ಡಿಗೆ ಹೆಗಲಿಗೆ ಹೊರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶುಕ್ರವಾರ ಸಂಪುಟಕ್ಕೆ ಸೇರ್ಪಡೆಯಾದ ವಿಧಾನ ಪರಿಷತ್‌ ಸದಸ್ಯ ಎಚ್‌.ಎಂ. ರೇವಣ್ಣ ಅವರಿಗೆ ಸಾರಿಗೆ ಖಾತೆ ನೀಡಿದ್ದಾರೆ.

ಸಂಪುಟಕ್ಕೆ ಹೊಸತಾಗಿ ಸೇರಿದ ವಿಧಾನ ಪರಿಷತ್‌ ಸದಸ್ಯ ಆರ್‌.ಬಿ. ತಿಮ್ಮಾಪೂರ ಅವರಿಗೆ ಅಬಕಾರಿ, ಎಂ.ಸಿ. ಮೋಹನ ಕುಮಾರಿ (ಗೀತಾ ಮಹದೇವ ಪ್ರಸಾದ್‌) ಅವರಿಗೆ ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಖಾತೆ ನೀಡಲಾಗಿದೆ.

ಪ್ರಮಾಣ ವಚನ ಸ್ವೀಕಾರ ಪೂರ್ಣಗೊಂಡ ಬೆನ್ನಿಗೆ ಮುಖ್ಯಮಂತ್ರಿ ಖಾತೆಗಳನ್ನು ಮರು ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೆಗಲಿಗೆ ಗೃಹ ಖಾತೆಯನ್ನು ವಹಿಸಿದ್ದಾರೆ. ಎಚ್‌.ಎಂ. ರೇವಣ್ಣ ಅವರಿಗೆ ಸಾರಿಗೆ ಖಾತೆ, ಅಬಕಾರಿ ಖಾತೆಯನ್ನು ತಿಮ್ಮಾಪುರ ಅವರಿಗೆ ನೀಡಲಾಗಿದೆ.

ADVERTISEMENT

ಸಣ್ಣ ಕೈಗಾರಿಕೆ ಖಾತೆ ಹೊಂದಿದ್ದ ರಮೇಶ ಜಾರಕಿಹೊಳಿ ಅವರಿಗೆ ಸಹಕಾರ ಖಾತೆ ನೀಡಲಾಗಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕೌಶಲ್ಯ ಅಭಿವೃದ್ಧಿ ಹೊಣೆಯನ್ನೂ ವಹಿಸಲಾಗಿದೆ. ಅಲ್ಲದೆ, ರಾಜ್ಯ ಸಚಿವರಾಗಿದ್ದ ಪ್ರಿಯಾಂಕ್‌ ಖರ್ಗೆ (ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಪ್ರವಾಸೋದ್ಯಮ), ರುದ್ರಪ್ಪ ಮಾನಪ್ಪ ಲಮಾಣಿ (ಜವಳಿ ಮತ್ತು ಮುಜರಾಯಿ), ಪ್ರಮೋದ್‌ ಮಧ್ವರಾಜ್‌ (ಯುವಜನ ಸೇವೆ ಮತ್ತು ಮೀನುಗಾರಿಕೆ) ಮತ್ತು ಈಶ್ವರ ಬಿ. ಖಂಡ್ರೆ ( ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆ) ಅವರಿಗೆ ಸಂಪುಟ ದರ್ಜೆ ಸ್ಥಾನಕ್ಕೆ ಬಡ್ತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.