ADVERTISEMENT

ಸಂಸದ ಕರಡಿ ಸೇರಿ 38 ಜನರ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 29 ಮೇ 2018, 19:30 IST
Last Updated 29 ಮೇ 2018, 19:30 IST

ಕೊಪ್ಪಳ: ನಗರ ಪೊಲೀಸ್‌ ಠಾಣೆಗೆ ನುಗ್ಗಿ ದಾಂದಲೆ ನಡೆಸಿದ ಸಂಬಂಧ ಸಂಸದ ಸಂಗಣ್ಣ ಕರಡಿ ಸೇರಿ 38 ಜನರ ವಿರುದ್ಧ ಮಂಗಳವಾರ ದೂರು ದಾಖಲಾಗಿದೆ.

ಸರ್ಕಾರಿ ಕೆಲಸಕ್ಕೆ ಅಡ್ಡಿ, ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ದೂರನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್ ಶೆಟ್ಟಿ ತಿಳಿಸಿದ್ದಾರೆ.

ಸೋಮವಾರ ಬಂದ್‌ ವೇಳೆ ಸಂಗಣ್ಣ ಕರಡಿ, ಬಿಜೆಪಿ ಕಾರ್ಯಕರ್ತರು ಹಾಗೂ ಡಿವೈಎಸ್ಪಿ ಎಸ್.ಎಂ.ಸಂದಿಗವಾಡ ಹಾಗೂ ಸಿಪಿಐ ರವಿ ಉಕ್ಕುಂದ ಅವರ ನಡುವೆ ತಳ್ಳಾಟ, ವಾಗ್ವಾದ ನಡೆದಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.