ADVERTISEMENT

ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2018, 11:46 IST
Last Updated 16 ಏಪ್ರಿಲ್ 2018, 11:46 IST
ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಆಕ್ರೋಶ
ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಆಕ್ರೋಶ   

ಬೆಂಗಳೂರು: 'ಯೋಗಿ ಆದಿತ್ಯನಾಥರಿಗೆ ಚಪ್ಪಲಿಯಲ್ಲಿ ಹೊಡಿಬೇಕು ಅಂದಿದ್ದೀರಲ್ಲ ದಿನೇಶ್ ಗುಂಡೂರಾವ್, ಇದೇ ಮಾತನ್ನು ಯೋಗಿ ಬದಲು ಒಬ್ಬ ಮುಲ್ಲಾನೋ, ಮೌಲ್ವಿ ಬಗ್ಗೆನೋ ಆಡಿದ್ರೆ, ನಿಮ್ಮ ಹೆಂಡತಿ ಬೇಗಂ ಟಬು ಅವರೇ ಆ ಕೆಲಸ ನಿಮಗೆ ಮಾಡಿರುತ್ತಿದ್ದರು, ನಾಲಗೆ ಮೇಲೆ ನಿಗಾ ಇರಲಿ' ಎಂದು ಸಂಸದ ಪ್ರತಾಪ್‌ ಸಿಂಹ ಟ್ವೀಟ್ ಮಾಡಿದ್ದರು. ದಿನೇಶ್ ಗುಂಡೂರಾವ್ ಅವರನ್ನು ಟೀಕಿಸುವ ಭರದಲ್ಲಿ ಪ್ರತಾಪ್ ಸಿಂಗ್ ಬೇಗಂ ಟಬು ಎಂದು ಉಲ್ಲೇಖಿಸಿರುವ ಬಗ್ಗೆ ಟಬು ರಾವ್ ಅವರು ಫೇಸ್‍ಬುಕ್‍ನಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಟಬು ರಾವ್ ಅವರ ಫೇಸ್‍ಬುಕ್  ಸ್ಟೇಟಸ್‍ನಲ್ಲಿ ಏನಿದೆ?

</p><p>ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರು ನನ್ನ ಬಗ್ಗೆ ಹೇಳಿದ ಮಾತುಗಳ ವಿಡಿಯೊ ತುಣುಕು ಸಾಮಾಜಿಕ  ಮಾದ್ಯಮಗಳಲ್ಲಿ ಮತ್ತು ಪ್ರಾದೇಶಿಕ ಸುದ್ದಿವಾಹಿನಿಗಳಲ್ಲಿ ಹರಿದಾಡುತ್ತಿದೆ. ಅವರ ಮಾತುಗಳು ನನಗೆ ನೋವನ್ನುಂಟುಮಾಡಿದೆ. ಮಿಸ್ಟರ್ ಸಿಂಹ ಅವರಿಗೆ ನನ್ನ ಪತಿ ದಿನೇಶ್ ಗುಂಡೂರಾವ್ ಅವರ ಹೇಳಿಕೆ ಬಗ್ಗೆ ಆಕ್ರೋಶವಿದ್ದರೆ ಅದನ್ನು ಅವರ ಜತೆಯೇ ತೀರಿಸಿಕೊಳ್ಳಲಿ. ಅದು ಬಿಟ್ಟು ಮಹಿಳೆಯ ಬಗ್ಗೆ ಈ ರೀತಿ ಹೇಳಿ ವಿವಾದವುಟುಂಮಾಡುವುದು ಹೇಡಿತನ.</p><p>ನನ್ನನ್ನು ಸಂಸದರು <strong>ಬೇಗಂ ಟಬು</strong> ಎಂದಿದ್ದಾರೆ. ಇದು ಅವರಲ್ಲಿರುವ  ಕೋಮುವಾದ ಮತ್ತು  ಸಂಕುಚಿತ ಮನಸ್ಥಿತಿಯನ್ನು ತೋರಿಸುತ್ತದೆ. ಮುಸ್ಲಿಂ  ಆಗಿರುವ ನಾನು ಬ್ರಾಹ್ಮಣನನ್ನು ಮದುವೆಯಾಗಿದ್ದೇನೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ ಆಗಿದೆ. ಎರಡು ದಶಕಗಳಿಂದ ನಾವು ದಾಂಪತ್ಯ ಜೀವನ ಸಾಗಿಸುತ್ತಿದ್ದೇವೆ ಎಂದರೆ ಅದು  ದೇಶದಲ್ಲಿರುವ ವಿವಿಧತೆಯಲ್ಲಿ ಏಕತೆಯನ್ನು ತೋರಿಸುತ್ತದೆ.<br/>&#13; ಮೈಸೂರಿನ ಆ ಸಂಸದರು ಸಮಾಜದಲ್ಲಿ ವಿಷ ಬೀಜ ಬಿತ್ತುವ ಬದಲು ಕವಿ, ಸಾಹಿತಿ ಕುವೆಂಪು ಅವರ ವಿಶ್ವ ಮಾನವ ತತ್ವವನ್ನು ಅನುಸರಿಸಲಿ</p><p><br/>&#13; <strong>ದಿನೇಶ್ ಗುಂಡೂರಾವ್ ಹೇಳಿದ್ದೇನು?</strong><br/>&#13; ‘ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಿಂದ ಹೊಡೆಯಿರಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿ<a href="http://www.prajavani.net/news/article/2018/04/15/566046.html" target="_blank">ನೇಶ್‌ ಗುಂಡೂರಾವ್‌</a> ಹೇಳಿದ್ದರು.<br/>&#13; ಜಮ್ಮು ಕಾಶ್ಮೀರ ಮತ್ತು ಉತ್ತರ ಪ್ರದೇಶದಲ್ಲಿ ನಡೆದ ಅತ್ಯಾಚಾರ ಘಟನೆಯನ್ನು ಖಂಡಿಸಿ ಮೌರ್ಯ ವೃತ್ತದಲ್ಲಿ ಶನಿವಾರ ಮೋಂಬತ್ತಿ ಬೆಳಗಿಸಿ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ‘ಮೋಸಗಾರ, ಸುಳ್ಳುಗಾರ ಯೋಗಿ ಮತ್ತೊಮ್ಮೆ ರಾಜ್ಯಕ್ಕೆ ಬಂದರೆ ಬುದ್ಧಿ ಕಲಿಸುತ್ತೇವೆ’  ಯೋಗಿ ಆದಿತ್ಯನಾಥ್ ಅಲ್ಲ, ಬೋಗಿ ಆದಿತ್ಯನಾಥ್. ಅಂಥ ವ್ಯಕ್ತಿ <a href="http://www.prajavani.net/news/article/2018/04/15/566133.html" target="_blank">ಕರ್ನಾಟಕ</a>ದ ಪವಿತ್ರ ಭೂಮಿಗೆ ಬಂದರೆ ಕಳಂಕವಾಗುತ್ತದೆ. ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಅವನು‌ ನಾಲಾಯಕ್. ಪ್ರಧಾನಿ ನರೇಂದ್ರ ‌ಮೋದಿ ತಕ್ಷಣ ಅವನನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಬಿಸಾಕಬೇಕು ಎಂದು ವಾಗ್ದಾಳಿ ನಡೆಸಿದ್ದರು.</p><p><strong>ದಿನೇಶ್ ಹೇಳಿಕೆಗೆ ಪ್ರತಾಪ್ ಸಿಂಹ ವಾಗ್ದಾಳಿ</strong></p><blockquote class="twitter-video" data-lang="en">&#13; <p dir="ltr" lang="kn">ಯೋಗಿ ಆದಿತ್ಯನಾಥರಿಗೆ ಚಪ್ಪಲಿಯಲ್ಲಿ ಹೊಡಿಬೇಕು ಅಂದಿದ್ದೀರಲ್ಲ ದಿನೇಶ್ ಗುಂಡೂರಾವ್, ಇದೇ ಮಾತನ್ನು ಯೋಗಿ ಬದಲು ಒಬ್ಬ ಮುಲ್ಲಾನೋ, ಮೌಲ್ವಿ ಬಗ್ಗೆನೋ ಆಡಿದ್ರೆ, ನಿಮ್ಮ ಹೆಂಡತಿ ಬೇಗಂ ತಬ್ಬು ಅವರೇ ಆ ಕೆಲಸ ನಿಮಗೆ ಮಾಡಿರುತ್ತಿದ್ದರು, ನಾಲಗೆ ಮೇಲೆ ನಿಗಾ ಇರಲಿ. <a href="https://t.co/IQPaRZnbMQ">pic.twitter.com/IQPaRZnbMQ</a></p>&#13; — Pratap Simha (@mepratap) <a href="https://twitter.com/mepratap/status/985372585687826432?ref_src=twsrc%5Etfw">April 15, 2018</a></blockquote><script async="" src="https://platform.twitter.com/widgets.js" charset="utf-8"/><p>ಯೋಗಿ ಆದಿತ್ಯನಾಥರಿಗೆ ಚಪ್ಪಲಿಯಲ್ಲಿ ಹೊಡಿಬೇಕು ಅಂದಿದ್ದೀರಲ್ಲ ದಿನೇಶ್ ಗುಂಡೂರಾವ್, ಇದೇ ಮಾತನ್ನು ಯೋಗಿ ಬದಲು ಒಬ್ಬ ಮುಲ್ಲಾನೋ, ಮೌಲ್ವಿ ಬಗ್ಗೆನೋ ಆಡಿದ್ರೆ, ನಿಮ್ಮ ಹೆಂಡತಿ ಬೇಗಂ ಟಬು ಅವರೇ ಆ ಕೆಲಸ ನಿಮಗೆ ಮಾಡಿರುತ್ತಿದ್ದರು, ನಾಲಗೆ ಮೇಲೆ ನಿಗಾ ಇರಲಿ' ಎಂದು <a href="http://www.prajavani.net/news/article/2018/04/15/566103.html" target="_blank">ಪ್ರತಾಪ್‌ ಸಿಂಹ</a>  ವಿಡಿಯೊವೊಂದನ್ನು  ಟ್ವೀಟ್ ಮಾಡಿದ್ದರು.</p><p> </p></p>

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.