ADVERTISEMENT

ಸಕಾಲ ಅನುಷ್ಠಾನ: ಮತ್ತೆ ಚಿಕ್ಕಬಳ್ಳಾಪುರಕ್ಕೆ ಅಗ್ರಸ್ಥಾನ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 19:30 IST
Last Updated 18 ಡಿಸೆಂಬರ್ 2013, 19:30 IST

ಬೆಂಗಳೂರು: ಸಕಾಲ ಯೋಜನೆ­ಯಡಿ ಅರ್ಜಿಗಳ ಸ್ವೀಕಾರ ಮತ್ತು ವಿಲೇವಾರಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಸತತ ಮೂರನೇ ತಿಂಗಳು ಮೊದಲ ಸ್ಥಾನದಲ್ಲಿ ಮುಂದು ವರಿದಿದೆ.

ನವೆಂಬರ್‌ ತಿಂಗಳಿನಲ್ಲಿ ಸಕಾಲ ಅನುಷ್ಠಾನದಲ್ಲಿ ಉತ್ತರ ಕನ್ನಡ ಮತ್ತು ರಾಮನಗರ ಜಿಲ್ಲೆಗಳು ಎರಡು ಹಾಗೂ ಮೂರನೇ ಸ್ಥಾನದ­ಲ್ಲಿವೆ. ಬೀದರ್‌ ಕೊನೆಯ ಸ್ಥಾನ ದಲ್ಲಿದ್ದರೆ, ಯಾದಗಿರಿ 29ನೇ ಮತ್ತು ಬಳ್ಳಾರಿ ಜಿಲ್ಲೆಗಳು 28ನೇ ಸ್ಥಾನ ದಲ್ಲಿವೆ.

ಸತತ ಮೂರನೇ ತಿಂಗಳು ಮೊದಲ ಸ್ಥಾನದಲ್ಲಿ ಮುಂದುವರಿ­ದಿರುವುದಕ್ಕಾಗಿ ಚಿಕ್ಕ­ಬಳ್ಳಾಪುರ ಜಿಲ್ಲಾಧಿಕಾರಿ ಆರ್‌.­ವಿಶಾಲ್‌ ಅವರನ್ನು ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಅಭಿನಂದಿಸಿದರು.

ಸಕಾಲ ಯೋಜನೆಯ ಅನುಷ್ಠಾನಕ್ಕೆ ಗಣನೀಯ ಕೊಡುಗೆ ನೀಡಿರುವ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ನೀಡಲಾಗುವುದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.