ಮುಧೋಳ (ಬಾಗಲಕೋಟೆ ಜಿಲ್ಲೆ): ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ತಾಯಿ ಸತ್ಯವ್ವ ಬಾಲಪ್ಪ ತಿಮ್ಮಾಪುರ (77) ಮಂಗಳವಾರ ರಾತ್ರಿ ನಿಧನರಾದರು.
ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸತ್ಯವ್ವ, ಪತಿ ಬಾಲಪ್ಪ ಅವರೊಂದಿಗೆ ಉತ್ತೂರಿನಲ್ಲಿ ವಾಸವಿದ್ದರು. ರಾತ್ರಿ ಊಟ ಮಾಡಿದ ನಂತರ ದಿಢೀರ್ ಅಸ್ವಸ್ಥರಾಗಿದ್ದ ಅವರನ್ನು ಮುಧೋಳದ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಅವರು ಅಲ್ಲಿ ಮೃತಪಟ್ಟಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ರೈಲಿನಲ್ಲಿ ಬೆಂಗಳೂರಿಗೆ ಹೊರಟಿದ್ದ ತಿಮ್ಮಾಪುರ, ತಾಯಿಯ ಸಾವಿನ ಸುದ್ದಿ ತಿಳಿದು ರಾಣೆಬೆನ್ನೂರಿನಿಂದ ವಾಪಸ್ ಬಂದರು.
ಮೃತರಿಗೆ ಪತಿ, ನಾಲ್ವರು ಪುತ್ರರು ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. ಬುಧವಾರ ಉತ್ತೂರ ಗ್ರಾಮದ ತೋಟದಲ್ಲಿ ಹಿರಿಯ ಪುತ್ರರಾದ ಆರ್.ಬಿ.ತಿಮ್ಮಾಪುರ ತಾಯಿಯ ಅಂತ್ಯಕ್ರಿಯೆ ನೆರವೇರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.