ADVERTISEMENT

ಸಚಿವ ರೇಣುಕಾಚಾರ್ಯಗೆ ಬೆದರಿಕೆ ಪತ್ರ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2011, 10:55 IST
Last Updated 8 ಅಕ್ಟೋಬರ್ 2011, 10:55 IST

ಹೊನ್ನಾಳಿ: ಅಬಕಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರಿಗೆ ಶನಿವಾರ ಬಾಂಬ್ ಬೆದರಿಕೆ ಪತ್ರ ಬಂದಿದೆ.
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಿಂದ ಪತ್ರವು ರವಾನೆಯಾಗಿದ್ದು, ಸಚಿವರ ಹೊನ್ನಾಳಿಯ ನಿವಾಸಕ್ಕೆ ಪತ್ರ ತಲುಪಿದೆ.

ಪತ್ರ ಬರೆದಿರವ ವ್ಯಕ್ತಿಯು ತಾನು ಎಲ್‌ಟಿಟಿಇ ಸಂಘಟನೆಗೆ ಸೇರಿದ್ದಾಗಿ ತಿಳಿಸಿದ್ದು, ಅಕ್ಟೋಬರ್ 12ರಂದು ರೂ 20 ಲಕ್ಷ ಹಣ ನೀಡಬೇಕು, ಇಲ್ಲದಿದ್ದರೆ ಬೆಂಗಳೂರು ಮತ್ತು ಹೊನ್ನಾಳಿ ಮನೆಗಳ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಆತ ಬೆದರಿಕೆ ಹಾಕಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.