
ಪ್ರಜಾವಾಣಿ ವಾರ್ತೆಸುಳ್ಯ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜನಪದ ಗಾಯಕಿ ಸಣ್ಣಕ್ಕ ಬಂಗ್ಲೆಗುಡ್ಡೆ (88) ಭಾನುವಾರ ಮುಂಜಾನೆ ನಿಧನರಾದರು.
ತುಳು ಪಾಡ್ದನ, ದೈವ ಸಂಧಿ ಸೇರಿದಂತೆ ಸುಮಾರು ನೂರೈವತ್ತಕ್ಕೂ ಹೆಚ್ಚು ಜನಪದ ಸಾಹಿತ್ಯ ಪ್ರಕಾರಗಳಲ್ಲಿ ಸುಲಲಿತವಾಗಿ ಹಾಡಬಲ್ಲ ಅವರಿಗೆ 2008ರ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ತಾಲ್ಲೂಕು ಸಾಹಿತ್ಯ ಸಮ್ಮೇಳನ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಗೌರವಕ್ಕೂ ಪಾತ್ರರಾಗಿದ್ದರು. ಅವರಿಗೆ ಪುತ್ರ, ಐವರು ಪುತ್ರಿಯರು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.