ADVERTISEMENT

ಸದ್ಯಕ್ಕಿಲ್ಲ ಜನಾಶೀರ್ವಾದ ಯಾತ್ರೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2017, 7:04 IST
Last Updated 5 ಡಿಸೆಂಬರ್ 2017, 7:04 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ಜನಾರ್ಶೀವಾದ ಯಾತ್ರೆ ಈಗ ಮಾಡುತ್ತಿಲ್ಲ. ಮಾರ್ಚ್ ಒಂದರಿಂದ ಯಾತ್ರೆ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

‌ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಈಗ ಯಾತ್ರೆ ಮಾಡುತ್ತಿದ್ದೇನೆ ಎಂದು ಯಾರು ಹೇಳಿದ್ದು ನಿಮಗೆ? ಮಾರ್ಚ್ ಒಂದರಿಂದ ಯಾತ್ರೆ ಮಾಡುತ್ತೇನೆ. ಸದ್ಯ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಹೋಗುತ್ತೇನೆ ಅಷ್ಟೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT