ADVERTISEMENT

ಸಹೋದ್ಯೋಗಿ ಕೊಲೆಗೆ ಸುಪಾರಿ ಕೊಟ್ಟ ಆರೋಪ: ರವಿ ಬೆಳಗೆರೆ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2017, 9:15 IST
Last Updated 8 ಡಿಸೆಂಬರ್ 2017, 9:15 IST
ರವಿ ಬೆಳಗೆರೆ
ರವಿ ಬೆಳಗೆರೆ   

ಬೆಂಗಳೂರು: ಸಹೋದ್ಯೋಗಿ ಸುನಿಲ್‌ ಹೆಗ್ಗರವಳ್ಳಿ ಎಂಬುವರ ಕೊಲೆಗೆ ಸುಪಾರಿ ಕೊಟ್ಟ ಆರೋಪದ ಮೇಲೆ ‘ಹಾಯ್‌ ಬೆಂಗಳೂರು’ ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಅವರನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ಸಂದರ್ಭದಲ್ಲಿ ರವಿ ಬೆಳಗೆರೆ, ಸುನಿಲ್‌ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಕೊಟ್ಟಿದ್ದ ವಿಷಯ ತಿಳಿದುಬಂದಿತ್ತು. ‘ಸುನಿಲ್‌ ಹೆಗ್ಗರವಳ್ಳಿ ಕೊಲೆ ಮಾಡಲು ರವಿ ಬೆಳಗೆರೆ ₹ 30 ಲಕ್ಷ ಸುಪಾರಿ ನೀಡಿದ್ದರು’ ಎಂದು ವಿಜಯಪುರದ ಶಾರ್ಪ್‌ಶೂಟರ್‌ ಶಶಿ ಮುಂಡೇವಾಡಗಿ ವಿಚಾರಣೆ ವೇಳೆ ತಿಳಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT