ADVERTISEMENT

ಸಾಲಬಾಧೆ: ಆತ್ಮಹತ್ಯೆ ಮಾಡಿಕೊಂಡ ರೈತ

​ಪ್ರಜಾವಾಣಿ ವಾರ್ತೆ
Published 9 ಜೂನ್ 2017, 9:18 IST
Last Updated 9 ಜೂನ್ 2017, 9:18 IST
ಸಾಲಬಾಧೆ: ಆತ್ಮಹತ್ಯೆ ಮಾಡಿಕೊಂಡ ರೈತ
ಸಾಲಬಾಧೆ: ಆತ್ಮಹತ್ಯೆ ಮಾಡಿಕೊಂಡ ರೈತ   

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಆಬಲವಾಡಿ ಗ್ರಾಮದ ರೈತ ಕೆ.ಕೃಷ್ಣೇಗೌಡ (41) ಸಾಲಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ನನ್ನ ಸಾವಿಗೆ ನಾನೇ ಕಾರಣ. ನನ್ನ ಹೆಂಡತಿ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ವ್ಯವಸಾಯಕ್ಕಾಗಿ ಬ್ಯಾಂಕ್‌ ಮತ್ತು ಸ್ನೇಹಿತರ ಬಳಿ ಸಾಲ ಮಾಡಿಕೊಂಡಿದ್ದೇನೆ. ಬೆಳೆ ಸರಿಯಾಗಿ ಆಗದಿರುವುದರಿಂದ ಸಾಲ ತೀರಿಸಲಾಗದೆ ಮನ ನೊಂದಿದ್ದೇನೆ. ದಯಮಾಡಿ ನನ್ನನ್ನು ಕ್ಷಮಿಸಿ’ ಎಂದು ಕೃಷ್ಣೇಗೌಡ ಚೀಟಿ ಬರೆದಿಟ್ಟಿದ್ದಾರೆ.

ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.