ADVERTISEMENT

ಸಾಹಿತಿ ಲಕ್ಷ್ಮಣ್‌ಜೀ ನಿಧನ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2017, 19:30 IST
Last Updated 2 ನವೆಂಬರ್ 2017, 19:30 IST
ಲಕ್ಷ್ಮಣ್‌ಜೀ
ಲಕ್ಷ್ಮಣ್‌ಜೀ   

ಬೆಂಗಳೂರು: ದಲಿತಪರ ಹೋರಾಟಗಾರ, ಚಿಂತಕ, ಸಾಹಿತಿ ಲಕ್ಷ್ಮಣ್‌ಜೀ (60) ಅವರು ಅನಾರೋಗ್ಯದಿಂದ ನಗರದ ನಂದಿನಿ ಲೇ ಔಟ್‌ ಬಡಾವಣೆಯ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿ ನಿಧನರಾದರು.

ಅವರಿಗೆ ಪತ್ನಿ, ಪುತ್ರಿ ಮತ್ತು ಇಬ್ಬರು ಪುತ್ರರು ಇದ್ದಾರೆ. ಸದಾಶಿವನಗರದ ಹೈದರಾಬಾದ್‌–ಕರ್ನಾಟಕ ಎಜುಕೇಷನ್‌ ಸೊಸೈಟಿಯ ಕಾಲೇಜಿನಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ, ಇತ್ತೀಚೆಗಷ್ಟೇ ಅವರು ನಿವೃತ್ತರಾಗಿದ್ದರು.

ಜಾತಿ ವಿನಾಶ ವೇದಿಕೆಯ ಅಧ್ಯಕ್ಷರಾಗಿ ವಿವಿಧ ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಸಾಹಿತ್ಯ ಪರಿಷತ್ತು, ಸಾಹಿತ್ಯ ಅಕಾಡೆಮಿ, ಸೇರಿ ಹಲವು ಗೌರವಗಳಿಗೆ ಪಾತ್ರರಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.