ಬೆಂಗಳೂರು: ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ, ಸಚಿವ ಅಂಬರೀಷ್ ಅವರು ಸಂಪೂರ್ಣ ಗುಣಮುಖರಾಗಿದ್ದು, ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ಕೆ.ಎಸ್.ಸತೀಶ್, ‘ಅಂಬರೀಷ್ ಅವರ ಆರೋಗ್ಯದಲ್ಲಿ ಉತ್ತಮ ರೀತಿಯಲ್ಲಿ ಸುಧಾರಣೆ ಕಂಡು-ಬಂದಿದೆ. ಅವರು ಸಹಜ ಜೀವನಕ್ಕೆ ಮರಳಿದ್ದಾರೆ’ ಎಂದು ತಿಳಿಸಿದರು.
‘ಆದರೂ ಅವರು ಕೆಲ ದಿನ ಸಿಂಗಪುರದಲ್ಲಿರುವ ಸ್ನೇಹಿತನ ಮನೆಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.