ADVERTISEMENT

ಸಿಂಗಪುರ ಆಸ್ಪತ್ರೆಯಿಂದ ಅಂಬರೀಷ್‌ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2014, 19:30 IST
Last Updated 22 ಮಾರ್ಚ್ 2014, 19:30 IST

ಬೆಂಗಳೂರು:  ಸಿಂಗಪುರದ ಮೌಂಟ್‌ ಎಲಿ­ಜಬೆತ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ­ಯುತ್ತಿದ್ದ ನಟ, ಸಚಿವ ಅಂಬರೀಷ್‌ ಅವರು ಸಂಪೂರ್ಣ ಗುಣಮುಖರಾ­ಗಿದ್ದು, ಶನಿವಾರ  ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ಕೆ.ಎಸ್‌.ಸತೀಶ್‌, ‘ಅಂಬರೀಷ್‌ ಅವರ ಆರೋಗ್ಯದಲ್ಲಿ ಉತ್ತಮ ರೀತಿಯಲ್ಲಿ ಸುಧಾರಣೆ ಕಂಡು­-ಬಂದಿದೆ. ಅವರು ಸಹಜ ಜೀವನಕ್ಕೆ ಮರಳಿದ್ದಾರೆ’ ಎಂದು ತಿಳಿಸಿದರು. 

‘ಆದರೂ ಅವರು ಕೆಲ ದಿನ ಸಿಂಗಪುರ­ದಲ್ಲಿರುವ ಸ್ನೇಹಿತನ ಮನೆಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.