ADVERTISEMENT

ಸಿಂದಗಿಯಲ್ಲಿ ಲಾಠಿ ಪ್ರಹಾರ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2011, 19:50 IST
Last Updated 7 ಸೆಪ್ಟೆಂಬರ್ 2011, 19:50 IST

ವಿಜಾಪುರ:ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಶಾಸಕ ರಮೇಶ ಭೂಸನೂರ ನೇತೃತ್ವದಲ್ಲಿ ಯುವಕರ ಗುಂಪೊಂದು ನೃತ್ಯ ಮಾಡುತ್ತಿದ್ದಾಗ ಒಂದು ಕೋಮಿನ ಜನರು ಕಲ್ಲು ತೂರಿದರು. ಇದರಿಂದಾಗಿ ನಿರ್ಮಾಣವಾದ ಉದ್ರಿಕ್ತ ವಾತಾವರಣ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ಬುಧವಾರ ರಾತ್ರಿ ಸಿಂದಗಿಯಲ್ಲಿ ನಡೆಯಿತು.

ಗಣಪತಿ ವಿಸರ್ಜನೆಯ ಮೆರವಣಿಗೆ ಸಾಗುತ್ತಿದ್ದಾಗ ಈ ಘಟನೆ ನಡೆಯಿತು. ಪಟ್ಟಣದಲ್ಲಿ ವಾತಾವರಣ ಗಂಭೀರವಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದ ಎಲ್ಲೆಡೆ ಪೊಲೀಸರು ಕಾವಲು ಕಾಯುತ್ತಿದ್ದಾರೆ. ಮೀಸಲು ಪಡೆ ಪೊಲೀಸರು ಬಿಡಾರ ಹೂಡಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಸ್ಥಿತಿಗತಿ ಪರಿಶೀಲನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.