ಬೆಂಗಳೂರು: ತಮಿಳಿನ ಯುವ ನಟ ಸಿಂಬು ಮನವಿಗೆ ಸ್ಪಂಧಿಸಿರುವ ಕನ್ನಡಿಗರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸೌಹಾರ್ಧತೆಯನ್ನು ಮೆರೆದಿದ್ದಾರೆ.
ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ಫೇಸ್ಬುಕ್, ಇನ್ಸ್ಟಾಗ್ರಾಂ ಮತ್ತು ವಾಟ್ಸ್ಆ್ಯಪ್ಗಳಲ್ಲಿ ತಮಿಳು ಸ್ನೇಹಿತರಿಗೆ ನೀರು ನೀಡುತ್ತಿರುವ ಫೋಟೊ ಮತ್ತು ವಿಡಿಯೊಗಳನ್ನು ಕನ್ನಡಿಗರು ಅಪ್ಲೋಡ್ ಮಾಡುತ್ತಿದ್ದಾರೆ. ಇದರ ಜತೆಗೆ #UniteForHumanity, #UniteForHumanity #Kannadigas #UnitForCauvery #CauveryMangementBoard #ISupportSimbu ಎಂಬ ಹ್ಯಾಶ್ ಟ್ಯಾಗ್ಗಳನ್ನು ಹಾಕುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.