ADVERTISEMENT

ಸಿಎಂ ಕಚೇರಿಯಿಂದ ಮತ್ತೊಬ್ಬರು ಹೊರಕ್ಕೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2012, 19:30 IST
Last Updated 9 ಏಪ್ರಿಲ್ 2012, 19:30 IST

ಬೆಂಗಳೂರು: ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ವಿಶೇಷ ಅಧಿಕಾರಿಯಾಗಿದ್ದ ಎಸ್.ಸಿ.ಅರವಿಂದ್ ಅವರನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಿ ಸೋಮವಾರ ಆದೇಶ ಹೊರಡಿಸಲಾಗಿದೆ.

ಮಾಜಿ ಸಿಎಂ ಯಡಿಯೂರಪ್ಪ ಸಹೋದರಿಯ ಪುತ್ರರಾದ ಅರವಿಂದ್ ಮೂಲತಃ ಕೆಎಂಎಫ್ ಉದ್ಯೋಗಿ. ಯಡಿಯೂರಪ್ಪ ಅಧಿಕಾರ ಅವಧಿಯಲ್ಲಿ ನಿಯೋಜನೆ ಮೇಲೆ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಇತ್ತೀಚೆಗೆ ಯಡಿಯೂರಪ್ಪ ಜತೆಗೇ ಹೆಚ್ಚು ಓಡಾಡಿಕೊಂಡು ಇದ್ದರು. ಹೀಗಾಗಿ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.