ಕಾರಟಗಿ (ಕೊಪ್ಪಳ ಜಿಲ್ಲೆ): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಟಿಪ್ಪು ಸುಲ್ತಾನ್ ಬಹಿರ್ದೆಸೆಗೆ ಕುಳಿತಂತೆ ಚಿತ್ರವನ್ನು ವಿರೂಪಗೊಳಿಸಿ ಫೇಸ್ಬುಕ್ಗೆ ಹಾಕಿದ ಹಾಗೂ ಅದನ್ನು ಶೇರ್ ಮಾಡಿದವರ ವಿರುದ್ಧ ಕಾರಟಗಿ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
ಕಾರ್ಕಳದ ಕುಸುಮಾ ಹರಿಜನ ಚಿತ್ರವನ್ನು ಫೇಸ್ಬುಕ್ನಲ್ಲಿ ಹಾಕಿದ್ದರು. ಬೂದಗುಂಪಾ ಗ್ರಾಮದ ಪಂಪನಗೌಡ ಜಂತಗಲ್ ಆ ಚಿತ್ರಗಳನ್ನು ಇತರರಿಗೆ ಶೇರ್ ಮಾಡಿದ್ದರು.
‘ಸಿದ್ದರಾಮಯ್ಯ ಹಾಗೂ ಟಿಪ್ಪು ಸುಲ್ತಾನ್ ಚಿತ್ರಗಳನ್ನು ವಿರೂಪಗೊಳಿಸಿ ಧಾರ್ಮಿಕ ಭಾವನೆಯನ್ನು ಕೆರಳಿಸುವ ಹಾಗೂ ಅಶಾಂತಿ ಸೃಷ್ಟಿಸುವ ಹುನ್ನಾರ ನಡೆಸಿದ್ದಾರೆ. ಇದರಿಂದ ಪಕ್ಷದ ಕಾರ್ಯಕರ್ತರಿಗೆ, ಮುಸ್ಲಿಮರಿಗೆ ನೋವಾಗಿದೆ. ಆದ್ದರಿಂದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಕಾರಟಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಂಬಣ್ಣ ನಾಯಕ ದೂರು ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.