ಬೆಂಗಳೂರು: `ಬೇರೆಯವರ ಆದೇಶದಂತೆ ಕೆಲಸ ಮಾಡುತ್ತಿರುವ ಡಿ.ವಿ.ಸದಾನಂದಗೌಡ ಅವರು ರಾಜ್ಯದ ದಿನಗೂಲಿ ಮುಖ್ಯ ಮಂತ್ರಿ~ ಎಂದು ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಎಚ್.ಡಿ. ಕುಮಾರ ಸ್ವಾಮಿ ಲೇವಡಿ ಮಾಡಿದರು.
ಜೆಡಿಎಸ್ ನಾಯಕರ ಕುರಿತು ಕೊಪ್ಪಳದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ನೀಡಿದ್ದ ಹೇಳಿಕೆ ಬಗ್ಗೆ ಭಾನುವಾರ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, `ರಾಜ್ಯದಲ್ಲಿ ನಾಲ್ಕು ಸರ್ಕಾರಗಳಿವೆ ಎಂದರು. ಯಡಿಯೂರಪ್ಪ, ಅನಂತಕುಮಾರ್, ಜಗದೀಶ ಶೆಟ್ಟರ್ ತಲಾ ಒಂದೊಂದು ಸರ್ಕಾರ ನಡೆಸುತ್ತಿದ್ದಾರೆ. ಸದಾನಂದ ಗೌಡ ಅವರು ದಿನಗೂಲಿ ಮುಖ್ಯಮಂತ್ರಿ ಆಗಿ ಕೆಲಸ ಮಾಡುತ್ತಿದ್ದಾರೆ~ ಎಂದು ವ್ಯಂಗ್ಯವಾಡಿದರು.
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ್ದ ತಮ್ಮ ವಿರುದ್ಧವೇ ಖಾಸಗಿ ಮೊಕ ದ್ದಮೆ ದಾಖಲಿಸಿರುವುದರ ಹಿಂದೆ ರಾಜಕೀಯ ಷಡ್ಯಂತ್ರ ಇದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.