ADVERTISEMENT

‘ಸಿ.ಎಂ ಹರಾಮ್‌ ಕೆಲಸ ಮಾಡುತ್ತಿದ್ದಾರೆ’

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2017, 19:30 IST
Last Updated 21 ಅಕ್ಟೋಬರ್ 2017, 19:30 IST
‘ಸಿ.ಎಂ ಹರಾಮ್‌ ಕೆಲಸ ಮಾಡುತ್ತಿದ್ದಾರೆ’
‘ಸಿ.ಎಂ ಹರಾಮ್‌ ಕೆಲಸ ಮಾಡುತ್ತಿದ್ದಾರೆ’   

ಮೈಸೂರು: ‘ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹರಾಮ್‌ ಕೆಲಸ ಮಾಡುತ್ತಿದ್ದಾರೆ’ ಎಂದು ಸಂಸದ ಪ್ರತಾಪಸಿಂಹ ಟೀಕಿಸಿದ್ದಾರೆ.

‘ಸಿದ್ದರಾಮಯ್ಯ ಅವರು ಮುಸ್ಲಿಂ ಧರ್ಮಕ್ಕೆ ವಿರುದ್ಧವಾದ ಕೆಲಸ ಮಾಡುತ್ತಿದ್ದಾರೆ. ಈ ಹರಾಮ್‌ ಕೆಲಸವನ್ನು ನಿಲ್ಲಿಸಬೇಕು. ಇಲ್ಲವಾದರೆ ಕಾಂಗ್ರೆಸ್‌ ಸರ್ಕಾರದೊಂದಿಗೆ ಟಿಪ್ಪು ಜಯಂತಿಯೂ ಕೊನೆಯಾಗಲಿದೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕದಂತೆ ಎರಡು ವರ್ಷಗಳ ಹಿಂದೆಯೇ ಕೊಡಗು ಜಿಲ್ಲಾಧಿಕಾರಿಗೆ ನಾನು, ಶಾಸಕರಾದ ಅಪ್ಪಚ್ಚುರಂಜನ್‌, ಕೆ.ಜಿ.ಬೋಪಯ್ಯ ಪತ್ರ ಬರೆದಿದ್ದೆವು. ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ, ಶೋಭಾ ಕರಂದ್ಲಾಜೆ ಅವರ ನಿಲುವಿಗೆ ನಮ್ಮ ಸಹಮತವಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.