ADVERTISEMENT

ಸಿಡಿಲು ಬಡಿದು ಗ್ರಾಮ ಪಂಚಾಯತಿ ಸದಸ್ಯೆ ಸಾವು

​ಪ್ರಜಾವಾಣಿ ವಾರ್ತೆ
Published 29 ಮೇ 2018, 9:05 IST
Last Updated 29 ಮೇ 2018, 9:05 IST
ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆ ಮೇಲೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆ ಮೇಲೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.   

ಉಡುಪಿ: ಕಾರ್ಕಳದ ಬೈಲೂರಿನಲ್ಲಿ ಮಂಗಳವಾರ ಮುಂಜಾನೆ 3ರ ಸುಮಾರಿಗೆ ಸಿಡಿಲು ಬಡಿದು ಗ್ರಾಮ ಪಂಚಾಯತಿ ಸದಸ್ಯೆ ಶೀಲಾ (34) ಎಂಬುವರು ಮೃತಪಟ್ಟಿದ್ದಾರೆ.

ಮನೆಯೊಳಗೆ‌ ಮಲಗಿದ್ದ ಸಂದರ್ಭ ಶೀಲಾ ಅವರಿಗೆ ಸಿಡಿಲು ಹೊಡೆದಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಗು ಕೊಚ್ಚಿಹೋಗಿರುವ ಶಂಕೆ

ADVERTISEMENT

ಅತ್ತಾವರ: ದಕ್ಷಿಣ ಕನ್ನಡ– ಉಡುಪಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಗುವೊಂದು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳ ಶೋಧ ಕಾರ್ಯಾಚರಣೆ ಆರಂಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.