ADVERTISEMENT

ಸಿದ್ದರಾಮಯ್ಯ ಅವರನ್ನು ಭಜನೆ ಮಾಡಲು ಕಳಿಸಿ

ಸಾದ್ವಿ ನಿರಂಜನ ಜ್ಯೋತಿ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2018, 14:52 IST
Last Updated 28 ಏಪ್ರಿಲ್ 2018, 14:52 IST
ಸಿದ್ದರಾಮಯ್ಯ ಅವರನ್ನು ಭಜನೆ ಮಾಡಲು ಕಳಿಸಿ
ಸಿದ್ದರಾಮಯ್ಯ ಅವರನ್ನು ಭಜನೆ ಮಾಡಲು ಕಳಿಸಿ   

ಕಲಬುರ್ಗಿ: ಕರ್ನಾಟಕದಲ್ಲಿ ಮೇ 12ರಂದು ಜರುಗುವ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸುವ ಮೂಲಕ ಸಿದ್ದರಾಮಯ್ಯ ಅವರನ್ನು ಭಜನೆ ಮಾಡಲು ಕಳಿಸಿ ಎಂದು ಕೇಂದ್ರ ಆಹಾರ ಸಂಸ್ಕರಣ ರಾಜ್ಯ ಸಚಿವೆ ಸಾದ್ವಿ ನಿರಂಜನ ಜ್ಯೋತಿ ಹೇಳಿದರು.

ನಗರದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಕರುನಾಡ ಮಹಿಳಾ ಜಾಗೃತಿ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯಕ್ಕೆ ಕೋಟ್ಯಂತರ ರೂಪಾಯಿ ಅನುದಾನ ನೀಡಿದೆ. ಆದರೆ ಸಿದ್ದರಾಮಯ್ಯ ಸರ್ಕಾರ ಅನುದಾನವನ್ನು ಸರಿಯಾಗಿ ಬಳಕೆ ಮಾಡಿಲ್ಲ. ಆದ್ದರಿಂದ ಬಿಜೆಪಿ ಗೆಲ್ಲಿಸುವ ಮೂಲಕ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಬೇಕು. ಸಿದ್ದರಾಮಯ್ಯ ಅವರನ್ನು ಮನೆಗೆ ಕಳುಹಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

'ವಂದೇ‌ ಮಾತರಂ ಗೀತೆಗೆ ಗೌರವ ನೀಡದ ರಾಹುಲ್ ಗಾಂಧಿ’

'ರಾಹುಲ್ ಗಾಂಧಿ ವಂದೇ ಮಾತರಂ ಗೀತೆಗೆ ಗೌರವ ಕೊಟ್ಟಿಲ್ಲ. ಅವರು ಇನ್ನೂ ಬಹಳಷ್ಟು ಕಲಿಯಬೇಕಾಗಿದೆ' ಎಂದು ಸಚಿವೆ ಸಾದ್ವಿ ನಿರಂಜನ ಜ್ಯೋತಿ ಹೇಳಿದರು.

'ದೇಶ ಕಾಂಗ್ರೆಸ್ ಮುಕ್ತವಾಗುತ್ತಿದ್ದು, ನಾಲ್ಕು ರಾಜ್ಯಗಳಷ್ಟೇ ಬಾಕಿ ಇದೆ.

ಕರ್ನಾಟಕ ರಾಜ್ಯವೂ ಸಹ ಕಾಂಗ್ರೆಸ್ ಮುಕ್ತ ಆಗಲಿದೆ.

ಕಾಂಗ್ರೆಸ್‌ನವರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸಮಾಜ ಜೋಡಣೆಯ ಕೆಲಸ ಕಾಂಗ್ರೆಸ್ಸಿಗರಿಗೆ ಗೊತ್ತೇ ಇಲ್ಲ. ಆದರೆ ಬಿಜೆಪಿ ಸಮಾಜ ಜೋಡಣೆಯ ಕೆಲಸ ಮಾಡುತ್ತಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.