ADVERTISEMENT

ಸಿದ್ದರಾಮಯ್ಯ ಇರುವುದೇ ದುಡ್ಡು ಹೊಡೆಯಲು: ಎಚ್.ಡಿ.ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 19:30 IST
Last Updated 10 ಮಾರ್ಚ್ 2018, 19:30 IST
ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ   

ತುಮಕೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಇರುವುದೇ ದುಡ್ಡು ಹೊಡೆಯುವುದಕ್ಕೆ. ಅವರಿಗೆ ಡೀಲ್ ಪಾಠ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

‘ಡೀಲ್ ಮಾಡುವುದನ್ನು ನಾನು ಕುಮಾರಸ್ವಾಮಿಯಿಂದ ಕಲಿಯಬೇಕಾ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ. ಅವರು ಹೇಳಿರುವುದು ಸರಿ ಇದೆ. ಅಧಿಕಾರಿಗಳ ಜತೆಗೆ ಹೇಗೆ ಡೀಲ್ ಮಾಡಿ ವ್ಯವಹಾರ ಕುದುರಿಸಬೇಕು ಎಂಬುದು ಅವರಿಗೆ ಕರಗತವಾಗಿದೆ’ ಎಂದು ಇಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT